ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಭಾಜಪದ ನಾಯಕನ ಹತ್ಯೆ

  • ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಪ್ರತಿದಿನ ಭಯೋತ್ಪಾದಕರನ್ನು ಕೊಲ್ಲಲಾಗುತ್ತಿದೆ, ಆದರೂ ಅಲ್ಲಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲಾಗಲಿಲ್ಲ. ಎಲ್ಲಿಯವರೆಗೆ ಭಯೋತ್ಪಾದಕರ ಕಾರ್ಖಾನೆಯಾಗಿರುವ ಪಾಕಿಸ್ತಾನವು ನಾಶವಾಗುವುದಿಲ್ಲವೋ ಅಲ್ಲಿಯವರೆಗೆ ಭಯೋತ್ಪಾದನೆ ನಾಶವಾಗುವುದಿಲ್ಲ !
  • ಕೇಂದ್ರದಲ್ಲಿ ಭಾಜಪ ಬಹುಮತದ ಸರಕಾರ ಇರುವಾಗ ಬಂಗಾಲ, ಕೇರಳ ಮತ್ತು ಕಾಶ್ಮೀರದಲ್ಲಿ ಸತತವಾಗಿ ತಮ್ಮ ನಾಯಕರ ಹತ್ಯೆಯಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಬಡಗಾಮ್ (ಜಮ್ಮು-ಕಾಶ್ಮೀರ) – ಬಡಗಾಮ್ ಜಿಲ್ಲೆಯ ಖಗ್ ಗ್ರಾಮದ ಭಾಜಪದ ಮುಖ್ಯಸ್ಥ ಭೂಪೇಂದ್ರ ಸಿಂಗ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸರಿಂದ ಅವರಿಗೆ ಭದ್ರತೆ ಒದಗಿಸಲಾಗಿತ್ತು; ಆದರೆ ಅವರು ಮನೆಗೆ ಹೋಗುವಾಗ ಭದ್ರತಾ ಸಿಬ್ಬಂದಿಯನ್ನು ಪೊಲೀಸ್ ಠಾಣೆಗೆ ಕಳುಹಿಸಿ ಏಕಾಂಗಿಯಾಗಿ ಮನೆಗೆ ಹೋಗಿದ್ದರು. ಭಯೋತ್ಪಾದಕರು ಮನೆಯೊಳಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದರು.