ನ್ಯಾಯಾಲಯಕ್ಕೆ ಇದನ್ನು ಏಕೆ ಹೇಳಬೇಕಾಗುತ್ತದೆ ? ಸರ್ಕಾರ ಸ್ವತಃ ಏಕೆ ಮಾಡುವುದಿಲ್ಲ ? ‘ಮಾಸ್ಕ್ ಹಾಕದೇ ತಿರುಗಾಡುತ್ತಿರುವ ಅಶಿಸ್ತಿನ ನಾಗರಿಕರಿಗೆ ಕರೋನಾ ತಗಲಿದರೆ, ಅವರ ಮೇಲೆ ಚಿಕಿತ್ಸೆ ನೀಡಬಾರದು’, ಎಂದು ಒತ್ತಾಯಿಸಿದರೆ ಆಶ್ಚರ್ಯಪಡಬೇಕಾಗಿಲ್ಲ !
ಪ್ರಯಾಗರಾಜ (ಉತ್ತರ ಪ್ರದೇಶ) – ರಾಜ್ಯದಲ್ಲಿ ಕರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಅಲಹಾಬಾದ್ ಉಚ್ಚ ನ್ಯಾಯಾಲಯವು ಇದನ್ನು ಗಮನಿಸಿ ‘ಮನೆಯಿಂದ ಹೊರಡುವಾಗ ಮಾಸ್ಕ ಧರಿಸದೇ ಇರುವುದು ಕಂಡುಬಂದರೆ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ’ ಪೊಲೀಸರಿಗೆ ಆದೇಶಿಸಿದೆ. ರಾಜ್ಯದದಲ್ಲಿಯ ‘ಕ್ವಾರಂಟೈನ್ ಸೆಂಟರ್ಸ್’ನ ಪರಿಸ್ಥಿತಿ ಮತ್ತು ‘ಕೋವಿಡ್-೧೯’ ಆಸ್ಪತ್ರೆಗಳಲ್ಲಿ ಸಿಗುವ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವಾಗ ನ್ಯಾಯಾಲಯ ಈ ಆದೇಶವನ್ನು ಜಾರಿಗೊಳಿಸಿತು.
Allahabad High Court directive on wearing mask compulsory https://t.co/pSX1E83tBv
— Lucknow News (@LucknowNewsLive) September 25, 2020
೧. ನ್ಯಾಯಾಲಯವು, ಒಬ್ಬ ವ್ಯಕ್ತಿಯು ಮಾಸ್ಕ್ ಧರಿಸದಿದ್ದರೆ, ಅವನು ಇಡೀ ಸಮಾಜದ ಅಪರಾಧಿಯಾಗಿದ್ದಾನೆ. ಉತ್ತರ ಪ್ರದೇಶದ ಪ್ರತಿ ಪೊಲೀಸ್ ಠಾಣೆಯಲ್ಲಿ ಮಾಸ್ಕ್ಗಳನ್ನು ಧರಿಸದೆ ಅಲೆದಾಡುವವರ ವಿರುದ್ಧ ಪೊಲೀಸ್ ಕೃತಿ ಪಡೆಯು ದಂಡ ವಿಧಿಸಬೇಕು ಎಂದು ಹೆಳಿದೆ.
೨. ಮನೆಯಲ್ಲಿ ಪ್ರತ್ಯೇಕಿಕರಣವಾಗಿ ವಾಸಿಸುವ ರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನ್ಯಾಯಾಲಯ ಆದೇಶಿಸಿದೆ. ಅಂತಹ ರೋಗಿಗಳಿಗೆ ಪ್ರತಿ ಜಿಲ್ಲೆಯಲ್ಲೂ ‘ಎಕ್ಸ-ರೆ’ ಮತ್ತು ‘ಸಿಟಿ ಸ್ಕ್ಯಾನ್’ಗೆ ಪ್ರತ್ಯೇಕ ಆಸ್ಪತ್ರೆಗಳು ಇರಬೇಕು, ಎಂದು ನ್ಯಾಯಾಲಯ ಹೇಳಿದೆ.

ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಕೊಲಕಾತಾ ಉಚ್ಚ ನ್ಯಾಯಾಲಯದಿಂದ ಗೋವಂಶಗಳ ಹತ್ಯೆಯ ಮೇಲಿನ ನಿಷೇಧ ಕಾಯಂ : Calcutta High Court
ಮಧ್ಯಪ್ರದೇಶ ಹೈಕೋರ್ಟ್ ವಿಚಾರಣೆ ಮುಂದೂಡಿಕೆಯ ಮುಸ್ಲಿಂ ಅರ್ಜಿದಾರರ ಮನವಿಗೆ ಸುಪ್ರೀಂ ಕೋರ್ಟ್ ನಕಾರ – Bhojshala Controversy
ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ! – ಸರ್ವೋಚ್ಚ ನ್ಯಾಯಾಲಯ Supreme Court Order
‘ಕೊಲಿಜಿಯಂ’ನಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿಯುವುದಿಲ್ಲ ! – Collegium
ಯಾವುದೇ ಸ್ಥಳದಲ್ಲಿ ನಮಾಜ್ ಮಾಡುವುದು ಧಾರ್ಮಿಕ ಹಕ್ಕಲ್ಲ ! – ಮುಂಬಯಿ ಉಚ್ಚ ನ್ಯಾಯಾಲಯ