ನೆಲ್ಲೂರು (ಆಂಧ್ರಪ್ರದೇಶ) – ಖ್ಯಾತ ಗಾಯಕ ಪದ್ಮಭೂಷಣ ಎಸ್.ಪಿ. ಬಾಲಸುಬ್ರಮಣ್ಯಮ್ ಇವರು ಸೆಪ್ಟೆಂಬರ್ ೨೫ ರಂದು ನಿಧನರಾದರು. ಅವರು ದೇಶದ ಅನೇಕ ಭಾಷೆಗಳಲ್ಲಿ ೪೦ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರನ್ನು ಧಾರ್ಮಿಕ ವ್ಯಕ್ತಿ ಎಂದು ಕರೆಯಲಾಗುತ್ತಿತ್ತು. ಅವರು ಆಂಧ್ರಪ್ರದೇಶದ ನೆಲ್ಲೂರಿನ ತಿಪ್ಪರಜುವಾರಿ ಸ್ಟ್ರೀಟ್ನಲ್ಲಿರುವ ತಮ್ಮ ಪಿತ್ರಾರ್ಜಿತ ಮನೆಯನ್ನು ಕಾಂಚಿ ಕಾಮಕೋಟಿ ಪೀಠಕ್ಕೆ ಇದೇ ವರ್ಷದ ಫೆಬ್ರವರಿಯಂದು ದಾನ ಮಾಡಿದ್ದರು. ಆ ಸ್ಥಳವನ್ನು ಈಗ ವೈದಿಕ ಪಾಠಶಾಲೆಯನ್ನು ನಡೆಸಲು ಬಳಸಲಾಗುವುದು.
When SP Balasubrahmanyam donated Nellore ancestral home to Kanchi Math for a noble cause https://t.co/hdrPuCzJbv
— Republic (@republic) September 26, 2020
ನೆಲ್ಲೂರಿನಲ್ಲಿ ನಡೆದ ಮಹತ್ವದ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ಕಾಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ ಸ್ವಾಮಿ ವಿಜಯೇಂದ್ರ ಸರಸ್ವತಿಯವರನ್ನು ಆಹ್ವಾನಿಸಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಮ್ ಅವರು ಪವಿತ್ರ ಶ್ಲೋಕಗಳನ್ನು ಪಠಿಸುವ ಮೂಲಕ ವಿಧಿಗಳಲ್ಲಿ ಭಾಗವಹಿಸಿದ್ದರು.

ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam
ಭಾರತೀಯ ಸೇನೆಯ ವಸಾಹತುಶಾಹಿ ಸಂಪ್ರದಾಯಗಳಲ್ಲಿ ಬದಲಾವಣೆ: ಸೇನಾ ಸಮವಸ್ತ್ರದ ಹೊಸ ನಿಯಮಾವಳಿ ಜಾರಿ : Army Uniform 2026