ಆಂಧ್ರಪ್ರದೇಶದ ಕ್ರೈಸ್ತ ಮುಖ್ಯಮಂತ್ರಿ ಜಗನಮೋಹನ ರೆಡ್ಡಿಯವರು ‘ಭಗವಾನ ವೆಂಕಟೇಶ್ವರನ ಮೇಲೆ ಶ್ರದ್ಧೆ ಇದೆ’ ಈ ಶಪಥಪತ್ರದಲ್ಲಿ ಹಸ್ತಾಕ್ಷರ ಮಾಡದೇ ತಿರುಪತಿ ದೇವಸ್ಥಾನಕ್ಕೆ ಪ್ರವೇಶಿಸಿದ ಪ್ರಕರಣ
|
ಅಮರಾವತಿ (ಆಂಧ್ರಪ್ರದೇಶ) – ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಕ್ರೈಸ್ತ ಮುಖ್ಯಮಂತ್ರಿ ವೈ.ಎಸ್. ಜಗನಮೋಹನ ರೆಡ್ಡಿಯವರು ಸೆಪ್ಟೆಂಬರ್ ೨೩ ರಂದು ತಿರುಮಲ ತಿರುಪತಿಯಲ್ಲಿರುವ ವೆಂಕಟೇಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಅವರು ಇತರ ಧರ್ಮಗಳಿಗೆ ಕಡ್ಡಾಯವಾಗಿರುವ ‘ಭಗವಾನ ವೆಂಕಟೇಶ್ವರನಲ್ಲಿ ಶ್ರದ್ಧೆ ಇದೆ’, ಎಂದು ಬರೆದಿರುವ ಶಪಥಪತ್ರದ ಮೇಲೆ ಹಸ್ತಾಕ್ಷರ ಮಾಡಿರಲಿಲ್ಲ. ಈ ಕೃತಿಯ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ‘ಜಗನಮೋಹನ ರೆಡ್ಡಿಯವರು ಶಪಥಪತ್ರದ ಮೇಲೆ ಹಸ್ತಾಕ್ಷರ ಮಾಡದಿರುವುದು ಕಾನೂನುದ್ರೋಹವಾಗಿದೆ’, ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅದೇರೀತಿ ಸಚಿವರಾದ ವೇಲಂಪಲ್ಲಿ, ಕೊಡಾಲಿ ನಾನಿ, ತಿರುಮಲ ತಿರುಪತಿ ದೇವಸ್ಥಾನಮ್ನ ಅಧ್ಯಕ್ಷ ಸುಬ್ಬಾ ರೆಡ್ಡಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಅನಿಲಕುಮಾರ್ ಸಿಂಘಾಲ್ ಅವರನ್ನು ಹುದ್ದೆಯಿಂದ ಕಿತ್ತೊಗೆಯಬೇಕೆಂದು ಒತ್ತಾಯಿಸಿದೆ. ಗುಂಟೂರು ಜಿಲ್ಲೆಯ ವೆಂಕಟಪುರಮ್ ಗ್ರಾಮದ ರೈತ ಅಲೋಕ ಸುಧೀರ್ ಬಾಬು ಅವರು ಈ ಅರ್ಜಿ ಸಲ್ಲಿಸಿದ್ದಾರೆ.

ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಕೊಲಕಾತಾ ಉಚ್ಚ ನ್ಯಾಯಾಲಯದಿಂದ ಗೋವಂಶಗಳ ಹತ್ಯೆಯ ಮೇಲಿನ ನಿಷೇಧ ಕಾಯಂ : Calcutta High Court
ಮಧ್ಯಪ್ರದೇಶ ಹೈಕೋರ್ಟ್ ವಿಚಾರಣೆ ಮುಂದೂಡಿಕೆಯ ಮುಸ್ಲಿಂ ಅರ್ಜಿದಾರರ ಮನವಿಗೆ ಸುಪ್ರೀಂ ಕೋರ್ಟ್ ನಕಾರ – Bhojshala Controversy
ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ! – ಸರ್ವೋಚ್ಚ ನ್ಯಾಯಾಲಯ Supreme Court Order
‘ಕೊಲಿಜಿಯಂ’ನಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿಯುವುದಿಲ್ಲ ! – Collegium
ಯಾವುದೇ ಸ್ಥಳದಲ್ಲಿ ನಮಾಜ್ ಮಾಡುವುದು ಧಾರ್ಮಿಕ ಹಕ್ಕಲ್ಲ ! – ಮುಂಬಯಿ ಉಚ್ಚ ನ್ಯಾಯಾಲಯ