ಉತ್ತರಪ್ರದೇಶ ಸರಕಾರದಿಂದ ಸರಕಾರಿ ಪತ್ರಿಕಾಪ್ರಕಟಣೆಯನ್ನು ಸಂಸ್ಕೃತ ಭಾಷೆಯಲ್ಲಿ ನೀಡಲು ಪ್ರಾರಂಭ

ಲಕ್ಷ್ಮಣಪುರಿ (ಲಖನೌ) – ಉತ್ತರಪ್ರದೇಶ ಸರಕಾರವು ಹಿಂದಿ, ಆಂಗ್ಲ ಮತ್ತು ಉರ್ದುವಿನೊಂದಿಗೆ ಇನ್ನು ಸಂಸ್ಕೃತ ಭಾಷೆಯಲ್ಲಿಯೂ ಸರಕಾರಿ ಸುತ್ತೋಲೆಯನ್ನು ಹೊರಡಿಸಲು ಪ್ರಾರಂಭಿಸಿದೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಈ ಬಗ್ಗೆ ನಿರ್ದೇಶನವನ್ನು ನೀಡಿದ್ದರು. ಇದರ ನಂತರ ರಾಜ್ಯದ ಆರೋಗ್ಯ ಇಲಾಖೆಯು ಕೊರೋನಾದ ಬಗ್ಗೆ ಪ್ರತಿದಿನದ ಪತ್ರಿಕಾ ಪ್ರಕಟಣೆಗಳನ್ನು ಸಂಸ್ಕೃತ ಭಾಷೆಯಲ್ಲಿ ಪ್ರಕಟಿಸಲು ಪ್ರಾರಂಭಿಸಿತು.
मुख्यमंत्री श्री @myogiadityanath जी के निर्देशानुसार शासकीय प्रेस विज्ञप्तियां अब संस्कृत भाषा में भी निर्गत की जाएंगी।
मुख्यमंत्री जी द्वारा कोविड-19 के दृष्टिगत प्रतिदिन की जा रही समीक्षा बैठक की आज की संस्कृत भाषा में निर्गत प्रेस विज्ञप्ति.. pic.twitter.com/601r7dGLYV
— CM Office, GoUP (@CMOfficeUP) September 26, 2020
ಮುಖ್ಯಮಂತ್ರಿಯ ಕಾರ್ಯಾಲಯವು ಈ ಬಗ್ಗೆ ಟ್ವೀಟ್ ಮಾಡಿ, ‘ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರಕಾರದ ಪತ್ರಿಕಾಪ್ರಕಟಣೆಗಳು ಈಗ ಸಂಸ್ಕೃತ ಭಾಷೆಯಲ್ಲಿ ಹೊರಡಿಸಲಾಗುವುದು. ಕೊರೋನಾ ಕುರಿತು ಮುಖ್ಯಮಂತ್ರಿ ಆದಿತ್ಯನಾಥ ಇವರು ನಡೆಸಿದ ಸಭೆಯ ಬಗ್ಗೆ ನಾವು ಮಾಹಿತಿ ಮತ್ತು ಪ್ರಸಾರ ಇಲಾಖೆಯಿಂದ ಸಂಸ್ಕೃತದಲ್ಲಿ ಪತ್ರಿಕಾ ಪ್ರಕಟಣೆ ಪ್ರಸಾರ ಮಾಡುತ್ತಿದ್ದೇವೆ’
ಸಂಸ್ಕೃತದಲ್ಲಿ ಪತ್ರಿಕಾ ಪ್ರಕಟಣೆಯನ್ನು ಬರೆಯಲು ೨ ಸಂಸ್ಕೃತ ಭಾಷೆ ತಿಳಿದಿರುವವರನ್ನು ರಾಜ್ಯ ಸರಕಾರದಿಂದ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು