ದೋಷಿಗಳಿಗೆ ಎಂತಹ ಶಿಕ್ಷೆ ನೀಡುತ್ತೇವೆಂದರೆ ಭವಿಷ್ಯದಲ್ಲಿ ಆ ಶಿಕ್ಷೆಯು ಉದಾಹರಣೆಯಾಗಿ ನೋಡಲಾಗುವುದು ! – ಹತ್ರಾಸ್ ಪ್ರಕರಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೇಳಿಕೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರಪ್ರದೇಶದ ಎಲ್ಲ ತಾಯಂದಿರು ಹಾಗೂ ಸಹೋದರಿಯರ ಗೌರವ ಮತ್ತು ಸ್ವಾಭಿಮಾನವನ್ನು ಕೆಡಿಸಲು ಪ್ರಯತ್ನಿಸುವವರ ನಾಶ ಖಚಿತವಿದೆ. ಭವಿಷ್ಯದಲ್ಲಿ ಅದನ್ನು ಉದಾಹರಣೆಯಾಗಿ ನೋಡುವ ರೀತಿಯಲ್ಲಿ ಅವರಿಗೆ ಶಿಕ್ಷೆಯಾಗುವುದು. ನಿಮ್ಮ ಉತ್ತರ ಪ್ರದೇಶ ಸರಕಾರ ಪ್ರತಿಯೊಬ್ಬ ತಾಯಿ ಮತ್ತು ಸಹೋದರಿಯ ರಕ್ಷಣೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಇದು ನಮ್ಮ ಸಂಕಲ್ಪ ಹಾಗೂ ನಮ್ಮ ಭರವಸೆಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದ ಹತ್ರಾಸ್‌ನಲ್ಲಿ ೧೯ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಥಳಿಸಿದ ನಂತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ದೇಹವನ್ನು ಶವಸಂಸ್ಕಾರ ಮಾಡಲು ಕುಟುಂಬಕ್ಕೆ ಅವಕಾಶ ನೀಡಲಿಲ್ಲ ಎಂಬ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ತದನಂತರ ಅವರು ಈ ಹೇಳಿಕೆ ನೀಡಿದ್ದಾರೆ.