
ಅಧ್ಯಾತ್ಮದ ಜಿಜ್ಞಾಸುಗಳು, ವಿವಿಧ ಯೋಗಮಾರ್ಗಗಳಿಗನುಸಾರ ಸಾಧನೆ ಮಾಡುವ ಸಾಧಕರು ಮತ್ತು ಧರ್ಮಪ್ರೇಮಿಗಳಿಗೆ ಆಧ್ಯಾತ್ಮಿಕ ಪ್ರಗತಿಗಾಗಿ ಮಾರ್ಗದರ್ಶನವಾಗ ಬೇಕು ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು ಎಂಬುದಕ್ಕಾಗಿ ಸನಾತನವು ಆಚಾರಧರ್ಮ, ಧಾರ್ಮಿಕ ಕೃತಿ, ದೇವತೆಗಳು, ಸಾಧನೆ, ರಾಷ್ಟ್ರರಕ್ಷಣೆ, ಧರ್ಮಜಾಗೃತಿ ಮುಂತಾದ ವಿಷಯಗಳ ಬಗ್ಗೆ ಗ್ರಂಥ ಮತ್ತು ಕಿರುಗ್ರಂಥಗಳನ್ನು ಪ್ರಕಾಶಿಸಿದೆ. ಈ ಜ್ಞಾನದಿಂದ ಕೇವಲ ಭಾರತ ಮಾತ್ರವಲ್ಲ ಜಗತ್ತಿನೆಲ್ಲೆಡೆಯ ಮಾನವರಿಗೆ ಲಾಭವಾಗುತ್ತಿದ್ದು ಅವರ ಜೀವನ ಉದ್ಧಾರವಾಗುತ್ತಿದೆ. ಗ್ರಂಥ ನಿರ್ಮಿತಿ ಪ್ರಕ್ರಿಯೆಯು ನಿರಂತರವಾಗಿ ನಡೆಯುತ್ತಿದ್ದು ಆಗಸ್ಟ್ ೨೦೨೦ ರವರೆಗೆ ಸನಾತನದ ೩೨೫ ಗ್ರಂಥಗಳ ೧೭ ಭಾಷೆಗಳಲ್ಲಿ ೮೦,೧೮,೦೦೦ ಪ್ರತಿಗಳನ್ನು ಪ್ರಕಟಿಸಲಾಗಿದ್ದು, ಇನ್ನೂ ೮೦೦೦ ಗ್ರಂಥಗಳನ್ನು ಪ್ರಕಟಿಸುವಷ್ಟು ಜ್ಞಾನ ಸಂಗ್ರಹವಾಗಿದೆ. ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥಸಂಪತ್ತನ್ನು ಮರಾಠಿಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಈ ಧರ್ಮಕಾರ್ಯದ ಸುವರ್ಣಾವಕಾಶವೇ ಆಗಿದೆ. ಅನುವಾದ ಮಾಡುವವರಿಗೆ ಮರಾಠಿ ಮತ್ತು ಕನ್ನಡ ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು. ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.
ಸಂಪರ್ಕ ಕ್ರ. : 9342435617
ವಿ-ಅಂಚೆ : [email protected]
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !