ದಾಳಿಯ ಸಮಯದಲ್ಲಿ ಬೇನಾಮಿ ೫೦ ಲಕ್ಷ ರೂಪಾಯಿ ಪತ್ತೆ ಎಂಬ ಆರೋಪ
ಇಲ್ಲಿಯವರೆಗೆ ಭ್ರಷ್ಟ ರಾಜಕಾರಣಿಗಳು, ಆಡಳಿತಾಧಿಕಾರಿಗಳು, ಉದ್ಯಮಿಗಳ ಮನೆಗಳ ಮೇಲೆ ದಾಳಿ ಮಾಡಲಾಗುತ್ತದೆ; ಆದರೆ ಮುಂದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸೆರೆಮನೆಗೆ ಹಾಕುವ ಘಟನೆ ತುಂಬಾ ವಿರಳವಾಗಿದೆ. ಇದು ವ್ಯವಸ್ಥೆಯ ವೈಫಲ್ಯವಲ್ಲವೇ ?
ಬೆಂಗಳೂರು – ಕಾಂಗ್ರೆಸ್ ಪಕ್ಷದ ಪ್ರದೇಶಾಧ್ಯಕ್ಷ ಡಿ.ಕೆ. ಶಿವಕುಮಾರ ಮತ್ತು ಅವರ ಸಹೋದರ ಸಂಸದ ಡಿ.ಕೆ. ಸುರೇಶ ಇವರ ಕರ್ನಾಟಕದಲ್ಲಿ ೯, ಮುಂಬಯಿಯಲ್ಲಿ ೧ ಮತ್ತು ದೆಹಲಿಯಲ್ಲಿ ೪ ಸ್ಥಳಗಳಲ್ಲಿ ಒಟ್ಟು ೧೪ ಸ್ಥಳಗಳಲ್ಲಿ ಸಿಬಿಐ ಅಕ್ಟೋಬರ್ ೫ ರಂದು ದಾಳಿ ಮಾಡಿದೆ. ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮೀಣ ಸಂಸದ ಡಿ.ಕೆ. ಸುರೇಶ ಅವರ ಮನೆಯ ಮೇಲೆಯೂ ಸಿಬಿಐ ದಾಳಿ ನಡೆಸಿತು. ಶಿವಕುಮಾರ ಮೇಲೆ ಅಕ್ರಮ ಆಸ್ತಿಗಳನ್ನು ಸಂಗ್ರಹಿಸಲಾಗಿದೆ ಎಂಬ ಆರೋಪವಿದೆ. ಈ ಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐಯು ವಿಶೇಷ ನ್ಯಾಯಾಲಯದಿಂದ ಅನುಮತಿ ಕೋರಿತ್ತು. ಈ ದಾಳಿಗಳಲ್ಲಿ ೫೦ ಲಕ್ಷ ರೂ. ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
CBI recovers Rs 50 lakh in raids at multiple premises of Congress' DK Shivakumar, search still underway https://t.co/9AEnlOPE3J pic.twitter.com/R4bxq7RHeI
— Economic Times (@EconomicTimes) October 5, 2020
ಈ ಕಾರ್ಯಾಚರಣೆಯನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ಮುಖಂಡ ಸಿದ್ದರಾಮಯ್ಯರವರು ಮಾತನಾಡುತ್ತಾ, ಭಾಜಪ ಯಾವಾಗಲೂ ಸೇಡಿನ ರಾಜಕೀಯವನ್ನು ಮಾಡುತ್ತದೆ ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
.@BJP4India has always tried to indulge in vindictive politics & mislead public attention.
The latest CBI raid on @KPCCPresident @DKShivakumar's house is another attempt to derail our preparation for bypolls.
I strongly condemn this.
— Siddaramaiah (@siddaramaiah) October 5, 2020
ಇದು ಉಪಚುನಾವಣೆಗೆ ನಾವು ಮಾಡಿದ ಸಿದ್ಧತೆಯನ್ನು ನಿಷ್ಕ್ರಿಯಗೊಳಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.


ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು