|
ಕೊಚ್ಚಿ (ಕೇರಳ) – ಕೇರಳ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ರಮಲಾ ಬಿವಿಯವರು ರಕ್ಷಾಬಂಧನ ಹಿಂದೂ ಹಬ್ಬವಾಗಿದ್ದರಿಂದ ಆಚರಿಸಬಾರದು’ ಎಂದು ರಾಜ್ಯ ವೈದ್ಯಕೀಯ ಕಾಲೇಜುಗಳಲ್ಲಿ ಆದೇಶ ಹೊರಡಿಸಿದ್ದಾರೆ. ಈ ಆದೇಶದಲ್ಲಿ, ‘ಅಧಿಕಾರಿಗಳ ಅನುಮತಿಯನ್ನು ಪಡೆಯದೇ ಕಳೆದ ಕೆಲವು ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ ರಕ್ಷಾಬಂಧನ ಕಾರ್ಯಕ್ರಮ ಆಯೋಜಿಸುತ್ತಿದೆ. ವೈದ್ಯಕೀಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಮತ್ತು ಇಂತಹ ಘಟನೆಗಳು ಪುನಃ ಸಂಭವಿಸದಂತೆ ತಡೆಯಲು ಮೇಲಿನ ಆದೇಶ ಹೊರಡಿಸುತ್ತಿದೆ’ ಎಂದು ಹೇಳಿದ್ದಾರೆ.
೧. ಅಕ್ಟೋಬರ್ ೧ ರಂದು ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಎಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಯೋಜಿಸಲು ಇಲಾಖೆಯ ಪೂರ್ವಾನುಮತಿಯು ಅಗತ್ಯವಿದೆ, ಎಂದು ಹೇಳುತ್ತಾ ರಾಜ್ಯದ ಎಲ್ಲ ವೈದ್ಯಕೀಯ, ನರ್ಸಿಂಗ್ ಮತ್ತು ದಂತ ವೈದ್ಯಕೀಯ ವಿದ್ಯಾಲಯಗಳಿಗೆ ಈ ಆದೇಶ ಅನ್ವಯಿಸುತ್ತದೆ.
೨. ಈ ಆದೇಶದ ಬಗ್ಗೆ ಕೇಳಿದಾಗ, ಡಾ. ರಮಲಾ ಬಿವಿಯವರು, ‘ರಕ್ಷಾಬಂಧನವು ಹಿಂದೂಗಳ ಹಬ್ಬವಾಗಿದೆ; ಆದ್ದರಿಂದ ಇದನ್ನು ವೈದ್ಯಕೀಯ ಕಾಲೇಜುಗಳಲ್ಲಿ ಆಚರಿಸಲು ಅನುಮತಿ ನೀಡಲಾಗುವುದಿಲ್ಲ.’ ಭಾರತದ ರಾಷ್ಟ್ರಪತಿ ಮತ್ತು ಪ್ರಧಾನಿ ಸೇರಿದಂತೆ ಸಮಾಜದ ಎಲ್ಲ ವರ್ಗದವರು ರಕ್ಷಾಬಂಧನವನ್ನು ಆಚರಿಸುತ್ತಾರೆ ಎಂದು ಸೂಚಿಸಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು