|
|
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಹಾಥರಸ್ನಲ್ಲಿ ೧೯ ವರ್ಷದ ಬಾಲಕಿಯ ಮೇಲಿನ ಕಥಿತ ಸಾಮೂಹಿಕ ಅತ್ಯಾಚಾರ ಮತ್ತು ತದನಂತರ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹಾಥರಸ್ನಲ್ಲಿ ಗಲಭೆ ನಡೆಸುವ ಸಂಚು ರೂಪಿಸಿದ ಪ್ರಕರಣದಲ್ಲಿ ಪೊಲೀಸರು ಅತೀಕ್ ಉರ್ ರೆಹಮಾನ್, ಸಿದ್ದಿಕಿ, ಮಸೂದ್ ಅಹಮದ ಮತ್ತು ಆಲಂ ಈ ನಾಲ್ವರನ್ನು ಬಂಧಿಸಿದ್ದಾರೆ. ಅವರಲ್ಲಿ ಒಬ್ಬನು ಪತ್ರಕರ್ತನಾಗಿದ್ದಾನೆ. ಈ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಹಾಗೂ ಅದರ ಅಂಗಸಂಸ್ಥೆಯಾದ ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ದೊಂದಿಗೆ ಸಂಬಂಧ ಹೊಂದಿದ್ದಾರೆ.
(ಸೌಜನ್ಯ : Republic World)
೧. ಪೊಲೀಸರು ನೀಡಿದ ಮಾಹಿತಿಗನುಸಾರ, ಕೆಲವು ಸಂದೇಹಾಸ್ಪದ ವ್ಯಕ್ತಿಗಳು ದೆಹಲಿಯಿಂದ ಹಾಥರಸ್ಗೆ ಹೋಗಿದ್ದರು. ಟೋಲ್ ನಾಕಾದಲ್ಲಿ ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ಅಡುವಾಗ ಈ ನಾಲ್ವರು ಯುವಕರನ್ನು ಅವರ ಅನುಮಾನಾಸ್ಪದ ಚಲನವಲನಗಳಿಂದ ಅವರನ್ನು ವಶಕ್ಕೆ ಪಡೆದುಕೊಂಡು ಅವರ ವಿಚಾರಣೆ ಮಾಡಲಾಯಿತು. ನಂತರ ಅವರನ್ನು ಬಂಧಿಸಲಾಯಿತು. ಅವರಿಂದ ಸಂಚಾರ ವಾಣಿ, ಲ್ಯಾಪ್ಟಾಪ್ಗಳು ಮತ್ತು ಇತರ ಅನುಮಾನಾಸ್ಪದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
೨. ಈ ನಾಲ್ವರು ಯುವಕರಲ್ಲಿ ಒಬ್ಬರು ವೃತ್ತಿಯಲ್ಲಿ ಪತ್ರಕರ್ತರಾಗಿದ್ದಾರೆ. ಆತ ಕೇರಳ ಮೂಲದ ಒಂದು ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದಾನೆ. ಪಿ.ಎಫ್.ಐ. ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಆತನಿಗೆ ಈ ಹಿಂದೆ ಸಹ ಕಾನೂನು ನೋಟಿಸ್ ಕಳುಹಿಸಲಾಗಿತ್ತು ಎಂದೂ ಹೇಳಲಾಗುತ್ತಿದೆ.
೩. ಕೇರಳದ ‘ಯುನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ ಅಸೋಸಿಯೇಶನ್’ ಆ ಪತ್ರಕರ್ತನನ್ನು ಬಿಡುಗಡೆ ಮಾಡುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಪತ್ರ ಬರೆದಿದೆ. ಅದರಲ್ಲಿ ಸದ್ಯದ ಪರಿಸ್ಥಿತಿಯ ಬಗ್ಗೆ ವರದಿ ಮಾಡಲು ಹಾಥರಸ್ಗೆ ಹೋಗಿದ್ದನು ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು