ಯಾವಾಗಲೂ ಸಮಾನತೆಯ ರಾಗ ಎಳೆಯುವ ಪ್ರಗತಿ(ಅಧೋಗತಿ)ಪರರು ಈಗ ಎಂದಿನಂತೆ ಅನುಕೂಲಕರ ಮೌನತಾಳಿ ‘ಜಾತ್ಯತೀತತೆಯ’ ಗೂಡಿನಲ್ಲಿ ಹೋಗಿ ಕುಳಿತುಕೊಳ್ಳುವರು !

ಲಕ್ಷ್ಮಣಪುರಿ (ಲಕ್ನೋ) – ಭಾರತವು ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಿಂದ ತುಂಬಿದ ದೇಶವಾಗಿದೆ. ಇಲ್ಲಿ ಸಮಾನ ನಾಗರಿಕ ಕಾನೂನನ್ನು ಅನ್ವಯಿಸುವುದು ತಪ್ಪಾಗಿದೆ. ಆದ್ದರಿಂದ ಸಮಾಜದ ವಿವಿಧ ಅಂಗಗಳನ್ನು ಸಂಪರ್ಕಿಸಿ, ನಾವು ಈಗಾಗಲೇ ಈ ಕಾನೂನಿನ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸಲಿದ್ದೇವೆ, ಎಂದು ‘ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ನ ಸದಸ್ಯ ಜಾಫರ್ಯಾಬ್ ಜಿಲಾನಿ ಅವರು ಇತ್ತೀಚೆಗೆ ‘ಬೋರ್ಡ್’ನ ಸಭೆಯಲ್ಲಿ ಹೇಳಿದರು.
‘ಸಮಾನ ನಾಗರಿಕ ಕಾನೂನು ಮತ್ತು ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ ೧೧ ಮತ್ತು ೧೩ ರಂದು ನಡೆದ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಆಡಳಿತಾರೂಢ ಬಿಜೆಪಿಯ ದೃಷ್ಟಿಯಿಂದ ಸಮಾನ ನಾಗರಿಕ ಕಾನೂನನ್ನು ಜಾರಿಗೆ ತರುವುದು ಮಾತ್ರ ಉಳಿದಿದೆ ಹಾಗೂ ಈ ನಿಟ್ಟಿನಲ್ಲಿ ಅದು ಕೆಲಸ ಮಾಡುತ್ತಿದೆ.’ ಎಂದು ಜಿಲಾನಿ ಹೇಳಿದರು.
ಬಾಬರಿ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸುವ ನಿರ್ಧಾರವನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು
ಬಾಬರಿ ಮಸೀದಿ ಧ್ವಂಸ ಮಾಡಿದ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ನಿರ್ಧಾರವನ್ನು ಉಚ್ಚನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದೂ ಜಿಲಾನಿ ಸ್ಪಷ್ಟ ಪಡಿಸಿದರು.

ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ