|

ಜಮ್ಮು : ಕಾಶ್ಮೀರಿ ಅಲ್ಲದವರು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿದರೆ, ಇಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ, ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕ ಸುರಿಂದರ್ ಚೌಧರಿ ಒಂದು ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕಲಂ ೩೭೦ ತೆಗೆದ ನಂತರ ಕಾಶ್ಮೀರಿ ಅಲ್ಲದವರು ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿಯನ್ನು ಖರೀದಿಸಬಹುದು, ಎಂದು ಕೇಂದ್ರ ಸರಕಾರವು ಘೋಷಿಸಿದೆ. ಅದರ ಬಗ್ಗೆ ಚೌಧರಿ ಮೇಲಿನ ಹೇಳಿಕೆ ನೀಡಿದ್ದಾರೆ.
ಚೌಧರಿ ತಮ್ಮ ಮಾತನ್ನು ಮುಂದುವರೆಸುತ್ತಾ, ‘ಕಾಶ್ಮೀರಿ ಅಲ್ಲದವರು ಇಲ್ಲಿಗೆ ಬಂದು ನೆಲೆಸುತ್ತಾರೆ ಮತ್ತು ಅತ್ಯಾಚಾರದಂತಹ ಅಪರಾಧಗಳನ್ನು ಮಾಡುತ್ತಾರೆ ಎಂದು ನಾನು ಹೇಳುತ್ತಿಲ್ಲ; ಆದರೆ ಅಸ್ಸಾಂ ಮತ್ತು ಮಹಾರಾಷ್ಟ್ರದವರು ಏನು ಹೇಳಿದ್ದರೋ ಅದನ್ನೇ ನಾವು ಅದನ್ನೇ ಹೇಳುತ್ತಿದ್ದೇವೆ, ಹೊರಗಿನವರು ಇಲ್ಲಿಗೆ ಬರಬಾರದು, ಇಲ್ಲದಿದ್ದರೆ ಅವರು ಇಲ್ಲಿ ಉದ್ಯೋಗ ಕಸಿದುಕೊಳ್ಳುತ್ತಾರೆ. ಫರಿದಾಬಾದ್ನಲ್ಲಿ ಏನಾಯಿತು ಎಂದು ನೀವು ನೋಡಿರಬಹುದು. ಅಲ್ಲಿ ಹುಡುಗಿಯೊಬ್ಬಳನ್ನು ಗುಂಡಿಕ್ಕಿ ಕೊಲ್ಲಲಾಯಿತು, ಮತ್ತು ಹತ್ರಾಸ್ನಲ್ಲಿ ಏನಾಯಿತು ? ಅತ್ಯಾಚಾರದ ಘಟನೆಗಳು ಹೆಚ್ಚಾಗುತ್ತಿವೆ, ಇವೆಲ್ಲವು ರಾಷ್ಟ್ರೀಯ ಚಾನೆಲ್ಗಳಲ್ಲಿ ತೋರಿಸಲಾಗುತ್ತಿದೆ” ಎಂದು ಹೇಳಿದರು.
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್