ತಿರುವನಂತಪುರಮ್ (ಕೇರಳ) – ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಇವರು ಕೇರಳ ಪೊಲೀಸ್ ಕಾಯ್ದೆಯಲ್ಲಿ ಸೆಕ್ಷನ್ ೧೧೮ (ಅ) ಅನ್ನು ಸೇರಿಸುವ ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಈ ಸೆಕ್ಷನ್ ಪ್ರಕಾರ ಸಾಮಾಜಿಕ ಮಾಧ್ಯಮದಲ್ಲಿ(ಸೋಶಲ್ ಮೀಡಿಯಾ) ಯಾವುದೇ ವ್ಯಕ್ತಿಯ ಮಾನಹಾನಿ, ಆತನಿಗೆ ನೀಡಿದ ಬೆದರಿಕೆ ಮತ್ತು ಆತನನ್ನು ಅವಮಾನಿಸುವುದು, ಶಿಕ್ಷಾರ್ಹ ಅಪರಾಧವಾಗಿದ್ದು ೫ ವರ್ಷಗಳವರೆಗೆ ಸೆರೆಮನೆ ಶಿಕ್ಷೆ ಅಥವಾ ೧೦,೦೦೦ ರೂಪಾಯಿಗಳ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.
೧. ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚುತ್ತಿರುವ ಅಪರಾಧಗಳ ಪ್ರಮಾಣವನ್ನು ತಡೆಯಲು ಈ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ ಎಂದು ಸರಕಾರವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇಂತಹ ಅಪರಾಧಗಳನ್ನು ತಡೆಗಟ್ಟಲು ಅಸ್ತಿತ್ವದಲ್ಲಿರುವ ಕಾನೂನುಗಳು ಸಾಕಾಗುತ್ತಿಲ್ಲ. ವಿಶೇಷವಾಗಿ ಸರ್ವೋಚ್ಚ ನ್ಯಾಯಾಲಯವು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೬ ಅ ಮತ್ತು ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ ೧೧೮ (ಡ) ಅನ್ನು ರದ್ದುಪಡಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
೨. ಈ ಕಲಂ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರು, ಸುಳ್ಳು ಸುದ್ದಿ, ದ್ವೇಷಭರಿತ ಭಾಷಣ ಮತ್ತು ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಿಸುವ ಪ್ರಕರಣಗಳು ಹೆಚ್ಚಾಗಿರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
೩. ಈ ತಿದ್ದುಪಡಿ ಮಾಧ್ಯಮಗಳ ಸ್ವಾತಂತ್ರ್ಯದ ಮೇಲಿನ ದಾಳಿ. ಈ ಸುಗ್ರೀವಾಜ್ಞೆಯು ವಾಕ್ ಮತ್ತು ನಾಗರಿಕ ಸ್ವಾತಂತ್ರ್ಯದ ಮೇಲಿನ ಗದಾಪ್ರಹಾರವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ ಚೆನ್ನಿಥಾಲಾ ಹೇಳಿದ್ದಾರೆ.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.