- ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇರುವಾಗ ಇಂತಹ ಘಟನೆಗಳು ಘಟಿಸುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಹಾಸನ(ಕರ್ನಾಟಕ) – ಇಲ್ಲಿನ ದೊಡ್ಡಗಡಾವಳ್ಳಿ ಚತುಶಕುತಾ ದೇವಸ್ಥಾನದಲ್ಲಿ ಶ್ರೀ ಮಹಾಕಾಳಿದೇವಿಯ ವಿಗ್ರಹವನ್ನು ಅಜ್ಞಾತ ವ್ಯಕ್ತಿಗಳು ಒಡೆದಿರುವುದು ಬೆಳಕಿಗೆ ಬಂದಿದೆ. ಈ ದೇವಸ್ಥಾನವನ್ನು ೧೧೧೩ ರಲ್ಲಿ ಹೊಯ್ಸಳ ರಾಜವಂಶದ ರಾಜ ವಿಷ್ಣುವರ್ಧನ ಇವರ ಆಡಳಿತಾವಧಿಯಲ್ಲಿ ನಿರ್ಮಿಸಲಾಗಿತ್ತು. ಇಲ್ಲಿ ಶ್ರೀ ಮಹಾಲಕ್ಷ್ಮೀಯ ವಿಶೇಷ ದೇವಸ್ಥಾನವೂ ಇದೆ ಮತ್ತು ದಕ್ಷಿಣ ಗರ್ಭಗುಡಿಯಲ್ಲಿ ಶ್ರೀ ಮಹಾಕಾಳಿದೇವಿಯ ವಿಗ್ರಹವನ್ನು ಸ್ಥಾಪಿಸಲಾಗಿತ್ತು. ಈ ದೇವಸ್ಥಾನದ ನಿರ್ವಹಣೆಯ ಜವಾಬ್ದಾರಿಯು ಪುರಾತತ್ವ ಇಲಾಖೆಯ ಬಳಿಯಿದೆ. ನವೆಂಬರ್ ೨೦ ರಂದು ಭಕ್ತರು ದರ್ಶನಕ್ಕಾಗಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.
Deeply disturbed and distraught to watch this desecration in Mahalakshmi Temple at Doddagaddavalli. I clearly remember my visit here.
Request Home Minister Sri @BSBommai to constitute a special Team to uncover the truth behind this act.
Anyone found guilty must be punished. pic.twitter.com/scFeqvsS5x
— C T Ravi 🇮🇳 ಸಿ ಟಿ ರವಿ (@CTRavi_BJP) November 20, 2020
(ಈ ಮೇಲಿನ ಚಿತ್ರ ಹಾಗು ವಿಡಿಯೋ ಯಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಲು ಆಗಿರದೇ, ನಿಜಸ್ಥಿತಿಯನ್ನು ತಿಳಿಸಬೇಕು ಈ ಉದ್ದೇಶಕ್ಕಾಗಿ ಪ್ರಕಟಿಸಲಾಗಿದೆ – ಸಂಪಾದಕ)
೧. ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರದ ತಜ್ಞ ಡಾ. ಶಾಲವಪಿಲ ಅಯ್ಯಂಗಾರ ಇವರು ಈ ಘಟನೆಗೆ ಪುರಾತತ್ವ ಇಲಾಖೆಯನ್ನು ದೂಷಿಸಿದ್ದಾರೆ. ಪ್ರಾಚೀನ ವಿಗ್ರಹದ ನಾಶವು ದೊಡ್ಡ ನಷ್ಟವಾಗಿದೆ ಎಂದು ಹೇಳಿದರು. ಸರಕಾರವು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ಬಗ್ಗೆ ಪುರಾತತ್ವ ಇಲಾಖೆಯು ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ
೨. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಇವರೂ ಕೂಡ ಈ ಘಟನೆಯ ಬಗ್ಗೆ ಖೇದ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ತನಿಖೆ ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ವಿಶೇಷ ತಂಡವನ್ನು ರಚಿಸಬೇಕು ಎಂದು ಕರ್ನಾಟಕ ಗೃಹ ಸಚಿವರಿಗೆ ಒತ್ತಾಯಿಸಿದ್ದಾರೆ.

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.