ಕರ್ನಾಟಕ ಸರಕಾರದಿಂದ ‘ಕರ್ನಾಟಕ ವೀರಶೈವ-ಲಿಂಗಾಯತ ನಿಗಮ’ಕ್ಕೆ ೫೦೦ ಕೋಟಿ ರೂಪಾಯಿ ಅನುದಾನ

ಬೆಂಗಳೂರು – ಬಿಜೆಪಿ ಸರಕಾರ ರಾಜ್ಯದಲ್ಲಿ ‘ಕರ್ನಾಟಕ ವೀರಶೈವ-ಲಿಂಗಾಯತ ನಿಗಮ’ದ ಸ್ಥಾಪನೆಗಾಗಿ ಪ್ರಕ್ರಿಯೆ ಆರಂಭಸಿ, ಅದಕ್ಕೆ ೫೦೦ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಈ ನಿಗಮವನ್ನು ಸ್ಥಾಪಿಸುವ ಬಗ್ಗೆ ಘೋಷಿಸಿದ್ದರು. ಕರ್ನಾಟಕದಲ್ಲಿ ಈ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಂಪನಿಗಳ ಕಾಯ್ದೆ – ೨೦೧೩ ರ ಅಡಿಯಲ್ಲಿ ಈ ನಿಗಮವನ್ನು ಸ್ಥಾಪಿಸಲಾಗುವುದು.

(ಸೌಜನ್ಯ : TV9 Kannada)