ಶಿವಮೊಗ್ಗದ ಬಜರಂಗ ದಳದ ಸಹಕಾರ್ಯದರ್ಶಿ ಶ್ರೀ. ನಾಗೇಶರವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಿ ! – ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಶ್ರೀ. ಮೋಹನ ಗೌಡ

ಶಿವಮೊಗ್ಗ – ಗುರವಾರದಂದು ಶಿವಮೊಗ್ಗ ನಗರ ಬಜರಂಗದಳದ ಸಹ ಕಾರ್ಯದರ್ಶಿ ನಾಗೇಶರವರು ವಾಯು ವಿಹಾರಕ್ಕೆ ಹೋದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ಇದರ ಬಗ್ಗೆ ಪ್ರಕಟಣೆ ಹೊರಡಿಸಿದ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಇವರು, “ಇದು ಕಸಾಯಿಗಳದ್ದೇ ಕೈವಾಡವಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮ ಕಸಾಯಿಖಾನೆ, ಅಕ್ರಮ ಗೋಸಾಗಾಟ ಹೆಚ್ಚಳವಾಗಿದೆ. ನಾಗೇಶ ಸೇರಿ ಅನೇಕರು ಇಂತಹ ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಅನೇಕ ಹೋರಾಟಗಳನ್ನು ಮಾಡಿದ್ದರು. ಅದಕ್ಕಾಗಿ ಕಸಾಯಿಗಳೇ ಶ್ರೀ. ನಾಗೇಶರವರ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಬೇಕು, ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ಶ್ರೀ. ನಾಗೇಶರರಿಗೆ ರಕ್ಷಣೆ ನೀಡಬೇಕು. ಅಲ್ಲದೇ ರಾಜ್ಯದಲ್ಲಿ ಆದಷ್ಟು ಬೇಗ ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತಿದೆ” ಎಂದು ಹೇಳಿದ್ದಾರೆ.