ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸಬೇಕಾಗುತ್ತದೆ ? ಕಾಂಗ್ರೆಸ್ ಸಂಸ್ಕೃತವನ್ನು ಮೃತವೆಂದು ನಿರ್ಧರಿಸಿದೆ, ಈ ಭಾಷೆಯನ್ನು ಈಗಿನ ಸರಕಾರವು ಪುನರುಜ್ಜೀವನಗೊಳಿಸಿ ಅದಕ್ಕೆ ತನ್ನ ಗತವೈಭವವನ್ನು ಮರಳಿ ದೊರಕಿಸಿಕೊಡಬೇಕೆಂದು ಸಂಸ್ಕೃತಪ್ರೇಮಿಗಳ ಅಪೇಕ್ಷೆಯಾಗಿದೆ !
ನವ ದೆಹಲಿ – ಸಂಸ್ಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆ ಹಾಗೂ ಹಿಂದಿಯನ್ನು ಅದರ ಅಧಿಕೃತ ಭಾಷೆ ಎಂದು ಘೋಷಿಸುವಂತೆ ಆಗ್ರಹಿಸುವ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ. ಗುಜರಾತನ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಕೆ.ಜಿ. ವಂಜಾರಾ ಇವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಧ್ಯ ಅವರು ಗುಜರಾತನ ಉಚ್ಚ ನ್ಯಾಯಾಲಯದ ವಕಾಲತ್ತನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಪ್ರಸ್ತುತ ೨೨ ಭಾಷೆಗಳಿವೆ; ಆದರೆ ಯಾವುದೇ ಭಾಷೆಗೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಿಲ್ಲ.
ಈ ಅರ್ಜಿಯಲ್ಲಿ, ಭಾರತವು ಇಸ್ರೈಲ್ನಿಂದ ಕಲಿಯಬೇಕಿದೆ. ಅದು ೧೯೪೮ ರಲ್ಲಿ ಹಿಬ್ರೂ(ಇಬ್ರಾನಿ) ಭಾಷೆಯನ್ನು ಆಂಗ್ಲ ಭಾಷೆಯ ಸಹಿತ ಅಧಿಕೃತ ರಾಷ್ಟ್ರೀಯ ಭಾಷೆಯನ್ನು ಘೋಷಿಸಿತು. ಹಿಬ್ರೂ ಭಾಷೆಯನ್ನು ಕಳೆದ ಜ್ಯೂಜನರ ೨ ಸಾವಿರ ವರ್ಷಗಳ ಹಳೆಯ ಮೃತ ಭಾಷೆಯೆಂದು ಪರಿಗಣಿಸಲಾಗಿತ್ತು. ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯೆಂದು ಘೋಷಿಸಿದರೆ ಅದಕ್ಕೆ ಯಾವುದೇ ಧರ್ಮ ಅಥವಾ ಜಾತಿಯಿಂದ ವಿರೋಧವಾಗುವುದಿಲ್ಲ. ಸಂಸ್ಕೃತದಿಂದ ಮಕ್ಕಳಲ್ಲಿ ಬೌದ್ಧಿಕ ವಿಕಾಸವಾಗುತ್ತದೆ ಎಂದು ಹೇಳಿದರು.

ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!