ಮಾರ್ಗಶಿರ ಹುಣ್ಣಿಮೆಯಂದು ಮೃಗಶಿರಾ ನಕ್ಷತ್ರದಲ್ಲಿ ಸಾಯಂಕಾಲ ದತ್ತನ ಜನ್ಮವಾಯಿತು, ಆದುದರಿಂದ ಆ ದಿನ ದತ್ತನ ಜನ್ಮೋತ್ಸವವನ್ನು ಎಲ್ಲ ದತ್ತಕ್ಷೇತ್ರಗಳಲ್ಲಿ ಆಚರಿಸಲಾಗುತ್ತದೆ.
ಇತಿಹಾಸ
‘ಹಿಂದಿನ ಕಾಲದಲ್ಲಿ ಪೃಥ್ವಿಯ ಮೇಲೆ ಸ್ಥೂಲ ಮತ್ತು ಸೂಕ್ಷ್ಮರೂಪದಲ್ಲಿ ಅಸುರೀ ಶಕ್ತಿಗಳು ಪ್ರಾಬಲ್ಯ ಬಹಳ ಹೆಚ್ಚಾಗಿತ್ತು. ಅವರನ್ನು ದೈತ್ಯರೆಂದು ಕರೆಯಲಾಗುತ್ತಿತ್ತು. ದೇವಗಣರು ಆ ಅಸುರೀ ಶಕ್ತಿಗಳನ್ನು ನಾಶಗೊಳಿಸಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾದವು. ಆಗ ಬ್ರಹ್ಮದೇವನ ಆಜ್ಞೆಗನುಸಾರ ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ರೂಪಗಳಲ್ಲಿ ದತ್ತನು ಅವತಾರ ತಾಳಬೇಕಾಯಿತು. ಆನಂತರ ದೈತ್ಯರು ನಾಶವಾದರು. ದತ್ತನು ಅವತಾರ ತಾಳಿದ ದಿನವನ್ನು ‘ದತ್ತಜಯಂತಿಯೆಂದು ಆಚರಿಸಲಾಗುತ್ತದೆ.
ಮಹತ್ವ
ಆ ದಿನದಂದು ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ ದತ್ತನ ನಾಮಜಪಾದಿ ಉಪಾಸನೆಯನ್ನು ಮಾಡಿದರೆ ದತ್ತತತ್ತ್ವದ ಆದಷ್ಟು ಹೆಚ್ಚು ಲಾಭವಾಗಲು ಸಹಾಯವಾಗುತ್ತದೆ.
ಜನ್ಮೋತ್ಸವವನ್ನು ಆಚರಿಸುವುದು
ದತ್ತಜಯಂತಿಯನ್ನು ಆಚರಿಸುವ ಸಂಬಂಧದಲ್ಲಿ ಶಾಸ್ತ್ರೋಕ್ತ ವಿಶಿಷ್ಟ ವಿಧಿವಿಧಾನಗಳು ಕಂಡುಬರುವುದಿಲ್ಲ. ಈ ಉತ್ಸವದ ಮೊದಲು ಏಳು ದಿನಗಳವರೆಗೆ ಗುರುಚರಿತ್ರೆಯ ಪಾರಾಯಣವನ್ನು ಮಾಡುವ ಪದ್ಧತಿಯಿದೆ. ಇದಕ್ಕೆ ಗುರುಚರಿತ್ರಸಪ್ತಾಹ ಎನ್ನುತ್ತಾರೆ. ಭಜನೆ, ಪೂಜೆ ಮತ್ತು ವಿಶೇಷವಾಗಿ ಕೀರ್ತನೆ ಇತ್ಯಾದಿ ಭಕ್ತಿಯ ವಿಧಗಳು ಪ್ರಚಲಿತವಾಗಿವೆ. ಮಹಾರಾಷ್ಟ್ರದಲ್ಲಿ ಔದುಂಬರ, ನರಸೋಬಾ ವಾಡಿ, ಗಾಣಗಾಪುರ ಇತ್ಯಾದಿ ದತ್ತಕ್ಷೇತ್ರಗಳಲ್ಲಿ ಈ ಉತ್ಸವಕ್ಕೆ ವಿಶೇಷ ಮಹತ್ವವಿದೆ. ತಮಿಳುನಾಡಿನಲ್ಲಿಯೂ ದತ್ತಜಯಂತಿಯ ರೂಢಿಯಿದೆ.

ದತ್ತಾತ್ರೇಯರ ಇತರ ತೀರ್ಥಕ್ಷೇತ್ರಗಳು
ಶ್ರೀ ದತ್ತಜಯಂತಿ (ಡಿಸೆಂಬರ್ ೧೪)
ಭಗವಾನ ದತ್ತಾತ್ರೇಯರು ಶಾಶ್ವತವಾಗಿ ನೆಲೆಸಿದ ಹಾಗೂ ೧೨ ಸಾವಿರ ವರ್ಷಗಳ ತಪಶ್ಚರ್ಯದಿಂದ ಸಿದ್ಧಪಡಿಸಿದ ‘ಗಿರ್ನಾರ್ ಪರ್ವತ’ಕ್ಕೆ ಪ್ರದಕ್ಷಿಣೆ ಹಾಕಿದ ಪುಣೆಯ ಶ್ರೀ. ಮಯುರೇಶ ಅನಗರಕರ್ !
ದತ್ತಾತ್ರೇಯ ಅವತಾರ
ಏಕಮುಖಿ ಮತ್ತು ತ್ರಿಮುಖಿ ದತ್ತಾತ್ರೇಯರ ಮೂರ್ತಿಗಳು !