ಮಹಾರಾಷ್ಟ್ರದ ಶಿಕ್ಷಕರೊಬ್ಬರು ಕಳುಹಿಸಿದ ಪತ್ರದ ಮೇರೆಗೆ ಪ್ರಧಾನಿ ಕಚೇರಿಯಿಂದ ಸೂಚನೆ
|
ನವ ದೆಹಲಿ – ಉತ್ತರ ಪ್ರದೇಶದಲ್ಲಿ ವಾಹನ ಸಂಖ್ಯೆ ಫಲಕಗಳಲ್ಲಿ ಜಾತಿಯನ್ನು ಬರೆಯುವ ಪದ್ದತಿಯಿದೆ. ಇದರಲ್ಲಿ ಯಾದವ್, ಜಾಟ್, ಗುರ್ಜರ್, ಬ್ರಾಹ್ಮಣ, ಪಂಡಿತ್, ಕ್ಷತ್ರಿಯ, ಲೋಧಿ, ಮೌರ್ಯ ಮುಂತಾದ ವಿವಿಧ ಜಾತಿಗಳ ಹೆಸರಿನ ಸ್ಟಿಕ್ಕರ್ಗಳನ್ನು ಅಂಟಿಸಲಾಗುತ್ತಿದೆ. ಇದು ಜಾತಿಯ ಮಹತ್ವವನ್ನು ತೋರಿಸುವ ಪ್ರಯತ್ನವಾಗಿದೆ; ಆದರೆ ಈಗ ಉತ್ತರ ಪ್ರದೇಶದ ಸಾರಿಗೆ ಇಲಾಖೆಯು ಇಂತಹ ಜಾತಿಯ ಗುರುತನ್ನು ತೋರಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ. ಪ್ರಧಾನಿ ಕಚೇರಿಯಿಂದ ಸೂಚನೆ ಸಿಕ್ಕಿದ ನಂತರ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ. ಅಂತಹ ಸ್ಟಿಕ್ಕರ್ಗಳನ್ನು ಹೊಂದಿರುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
Vehicles with caste stickers to be seized in Uttar Pradesh: Reporthttps://t.co/d8xbh4Rqkc pic.twitter.com/bDAT1ZfjUC
— Hindustan Times (@htTweets) December 27, 2020
ಮಹಾರಾಷ್ಟ್ರದ ಶಿಕ್ಷಕ ಹರ್ಷಲ ಪ್ರಭು ಅವರು ಪತ್ರವನ್ನು ಕಳುಹಿಸಿದ ನಂತರ, ಪ್ರಧಾನಿ ಕಚೇರಿ ಈ ವಿಷಯದ ಬಗ್ಗೆ ಗಮನ ಹರಿಸಿತು. ಅಂತಹ ಸ್ಟಿಕ್ಕರ್ಗಳು ನಮ್ಮ ಸಾಮಾಜಿಕ ಸಾಮರಸ್ಯಕ್ಕೆ ಒಂದು ರೀತಿಯ ಅಪಾಯ ನಿರ್ಮಾಣ ಮಾಡುತ್ತವೆ ಎಂದು ಹರ್ಷಲ ಪ್ರಭು ಹೇಳಿದ್ದಾರೆ.

ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!