ಉತ್ತರಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಾದ ಸಾಧು ಸಂತರು ಮತ್ತು ಅರ್ಚಕರ ಹತ್ಯೆಗಳನ್ನು ನೋಡಿದರೆ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಾಳಿಗೆ ತೂರಲಾಗಿದೆ ಎಂಬುದು ಗಮನಕ್ಕೆ ಬರುತ್ತದೆ. ರಾಜ್ಯದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ
ಲಕ್ಷ್ಮಣಪುರಿ (ಉತ್ತರಪ್ರದೇಶ) – ಇಲ್ಲಿನ ಶಿವಪುರಿ ಊರಿನಲ್ಲಿರುವ ಐತಿಹಾಸಿಕ ರಣಬಾಬಾ ಮಹಾದೇವ ದೇವಸ್ಥಾನದಲ್ಲಿ ೧೯ ಜನವರಿಯ ರಾತ್ರಿ ಅಪರಿಚಿತರು ಲೂಟಿ ಮಾಡಿ ಅಲ್ಲಿನ ೮೦ ವರ್ಷದ ಬಾಬಾ ಫಕೀರೆ ದಾಸ ಇವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಇಲ್ಲಿನ ಅರ್ಪಣೆ ಪೆಟ್ಟಿಗೆಯಲ್ಲಿರುವ ಹಣವನ್ನು ಕದ್ದು ಪಲಾಯನ ಮಾಡಿದ್ದಾರೆ ಹಾಗೂ ೩ ಘಂಟೆಗಳು ಹಾಗೂ ದೇವಸ್ಥಾನದಲ್ಲಿರುವ ಧಾನ್ಯವನ್ನೂ ಸಹ ಕಳ್ಳರೂ ಕದ್ದೊಯ್ದಿದ್ದಾರೆ. ೧೫ ವರ್ಷಗಳಿಂದ ಬಾಬಾ ಫಕೀರೆ ದಾಸರು ಇಲ್ಲಿ ವಾಸಿಸುತ್ತಿದ್ದರು ಎಂದು ಗ್ರಾಮಸ್ಥರು ಹೇಳಿದ್ದಾರೆ. ಪೊಲೀಸರು ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!