ಹೊಸ ದೆಹಲಿ – ಕೊರೊನಾದ ಹಿನ್ನೆಲೆಯಲ್ಲಿಯೂ ದೇಶದಲ್ಲಿ ೭೨ನೆಯ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಆಚರಿಸಲಾಯಿತು. ರಾಜಧಾನಿ ದೆಹಲಿಯ ರಾಜಪಥದಲ್ಲಿ ಸೈನಿಕರ ಪಥಸಂಚಲನ ಸಹಿತ ವಿವಿಧ ರಾಜ್ಯಗಳು ಮತ್ತು ವಿಭಾಗಗಳ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಸಲಾಯಿತು. ಈ ಸಂಚಲನದಲ್ಲಿ ಮೊದಲ ಬಾರಿಗೆ ಬಂಗ್ಲಾದೇಶದ ಸೈನಿಕರ ಒಂದು ತುಕಡಿಯು ಪಾಲ್ಗೊಂಡಿತ್ತು. ಇದರೊಂದಿಗೆ ಭಾರತದ ವಾಯುಪಡೆಯಲ್ಲಿ ಹೊಸದಾಗಿ ಸೇರಿಸಲಾಗಿರುವ ‘ರಾಫೆಲ್’ ಯುದ್ಧ ವಿಮಾನವನ್ನು ಸಹ ಪಥಸಂಚಲನದಲ್ಲಿ ಸೇರಿಸಲಾಗಿತ್ತು. ಕೊರೊನಾದಿಂದಾಗಿ ಕಳೆದ ೫೫ ವರ್ಷಗಳ ಇತಿಹಾಸದಲ್ಲಿ ಮೊದಲಬಾರಿಗೆ ಮುಖ್ಯ ಅತಿಥಿ ಎಂದು ಯಾವುದೇ ವಿದೇಶೀ ಗಣ್ಯರ ಉಪಸ್ಥಿತಿ ಇರಲಿಲ್ಲ. ರಾಷ್ಟ್ರಪತಿ ರಾಮನಾಥ ಕೋವಿಂದರವರನ್ನು ಸೈನಿಕರು ಅಭಿವಂದಿಸಿದರು. ಈ ಸಮಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಂತ್ರಿಮಂಡಲದ ಇತರ ಮಂತ್ರಿಗಳು ಹಾಗೂ ಗಣ್ಯರು, ಬಹುಸಂಖ್ಯೆಯಲ್ಲಿ ನಾಗರಿಕರೂ ಉಪಸ್ಥಿತರಿದ್ದರು.
(ಸೌಜನ್ಯ : DD national)

ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ