ನವ ದೆಹಲಿ: ದೇಶದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ೧.೫ ಲಕ್ಷ ರೂ.ಗಳವರೆಗೆ ನಗದು ರಹಿತ ನೆರವಿನ ಯೋಜನೆಯನ್ನು ಕೇಂದ್ರ ಸರಕಾರವು ೨೦೨೧-೨೦೨೨ ರಲ್ಲಿ ಜಾರಿಗೆ ತರುವ ಸಾಧ್ಯತೆಯಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕಿಯನ್ನು ಆಸ್ಪತ್ರೆಗಳು ತಕ್ಷಣ ದಾಖಲಿಸಿ ಚಿಕಿತ್ಸೆ ನೀಡುವುದು ಕಡ್ಡಾಯವಾಗಿರುತ್ತದೆ. ಈ ಯೋಜನೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ರೂಪಿಸಿದೆ. ದೇಶದಲ್ಲಿ ಪ್ರತಿ ವರ್ಷ ೫ ಲಕ್ಷ ಅಪಘಾತಗಳಲ್ಲಿ ಒಂದೂವರೆ ಲಕ್ಷ ಜನರು ಸಾವನ್ನಪ್ಪುತ್ತಾರೆ ಮತ್ತು ಸುಮಾರು ಮೂರೂವರೆ ಲಕ್ಷ ಜನರು ಅಂಗವಿಕಲರಾಗುತ್ತಾರೆ.
ಈ ಯೋಜನೆಯಡಿ ಮೋಟಾರು ವಾಹನ ಅಪಘಾತ ನಿಧಿಯನ್ನು ಸ್ಥಾಪಿಸಲಾಗುವುದು. ಇದು ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಹಾಗೂ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರವನ್ನು ಒದಗಿಸಲಿದೆ. ಪರಿಹಾರ ಮತ್ತು ಸಹಾಯದ ಮೊತ್ತವನ್ನು ಕೇಂದ್ರ ಸರಕಾರವು ನಿರ್ಧರಿಸಲಿದೆ.
ನಗದುರಹಿತ ಚಿಕಿತ್ಸೆಯ ಪ್ರಮುಖ ಅಂಶಗಳು
೧. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಆಸ್ಪತ್ರೆಗಳು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ನೀಡುವುದು ಕಡ್ಡಾಯವಾಗಿರುತ್ತದೆ.
೨. ಗಾಯಗೊಂಡ ವ್ಯಕ್ತಿಯು ಸಂಪೂರ್ಣವಾಗಿ ಗುಣಮುಖವಾಗುವವರೆಗೆ ನಗದುರಹಿತ ಚಿಕಿತ್ಸೆ ಮುಂದುವರಿಯುತ್ತದೆ.
೩. ಗಾಯಾಳುಗಳನ್ನು ಆಸ್ಪತ್ರೆಗೆ ಅಥವಾ ಇನ್ನೊಂದು ಆಸ್ಪತ್ರೆಗೆ ಸಾಗಿಸುವ ವೆಚ್ಚವು ಸಹ ಇದರಲ್ಲಿ ಒಳಗೊಂಡಿರುತ್ತದೆ.
೪. ಗಾಯಗೊಂಡ ಪ್ರತಿಯೊಬ್ಬ ವ್ಯಕ್ತಿಗೂ ೧.೫ ಲಕ್ಷ ರೂ. ವರೆಗಿನ ಚಿಕಿತ್ಸೆಯ ವೆಚ್ಚ ಒಳಗೊಂಡಿದೆ.

Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!