ಸುಖಬೀರ್ ಸಿಂಗ್ ಬಾದಲ್ ಅವರ ವಾಹನ ಧ್ವಂಸ
ಕಾಂಗ್ರೆಸ್ ರಾಜ್ಯದಲ್ಲಿ ಕಾಂಗ್ರೆಸ್ನ ಗೂಂಡಾಗಿರಿ! ಇಂತಹ ಪಕ್ಷವು ಎಂದಾದರೂ ಕಾನೂನಿನ ರಾಜ್ಯವನ್ನು ನೀಡಬಹುದೇ?

ಜಲಾಲಾಬಾದ್ (ಪಂಜಾಬ್) – ಸ್ಥಳೀಯ ಸ್ವರಾಜ್ಯ ಸಂಸ್ಥೆಯ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳದ ಕಾರ್ಯಕರ್ತರ ನಡುವೆ ಬಿರುಸಿನ ಕಲ್ಲು ತೂರಾಟ ಮತ್ತು ಲಾಠಿಗಳಿಂದ ಹಲ್ಲೆ ನಡೆದಿದೆ. ಈ ಸಮಯದಲ್ಲಿ ಅಕಾಲಿ ದಳದ ಅಧ್ಯಕ್ಷ ಸುಖಬಿರ್ ಸಿಂಗ್ ಬಾದಲ್ ಅವರ ವಾಹನದ ಮೇಲೆಯೂ ಕಲ್ಲು ತೂರಾಟ ಮಾಡಲಾಯಿತು. ಇದರಲ್ಲಿ ವಾಹನಕ್ಕೆ ತೀವ್ರ ಹಾನಿಯಾಗಿದೆ. ಸುಖಬಿರ್ ಸಿಂಗ್ ಬಾದಲ್ ಅವರನ್ನು ಕಾಪಾಡಲು ಮುಂದೆ ಬಂದ ೩ ಕಾರ್ಯಕರ್ತರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಅಕಾಲಿ ದಳವು ಮಾಹಿತಿ ನೀಡಿದೆ. ಅದೇರೀತಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಅಕಾಲಿ ದಳವು ಆರೋಪಿಸಿದೆ.
(ಸೌಜನ್ಯ : India Today)
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್