ಉತ್ತರ ಪ್ರದೇಶದ ಮದರಸಾಗಳಿಗೆ ಸಿಗುವ ಸರ್ಕಾರದ ನಿಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು!

ಮದರಸಾಗಳಿಗೆ ನೀಡಲಾಗುವ ಸರ್ಕಾರದ ಹಣವನ್ನು ಏಕೆ ನಿಲ್ಲಿಸಲಾಗುತ್ತಿಲ್ಲ?

ಲಕ್ಷ್ಮಣಪುರಿ (ಉತ್ತರ ಪ್ರದೇಶ)– ಉತ್ತರಪ್ರದೇಶದಲ್ಲಿ ಮದರಸಾಗಳ ಹೆಸರಿನಲ್ಲಿ ಸರ್ಕಾರದ ಹಣವನ್ನು ಕೊಳ್ಳೆಹೊಡೆಯಲಾಗುತ್ತಿದೆ. ಕೆಲವು ಸ್ಥಳಗಳಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆದರೆ, ಕೆಲವು ಸ್ಥಳಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹಗರಣ ಕಂಡುಬಂದಿದೆ. ಮಾಹಿತಿ ಹಕ್ಕು ಕಾನೂನಿನಡಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಈಗ ಅದರ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ಆದೇಶಿಸಿದೆ. ರಾಜ್ಯದ ಮಿರ್ಜಾಪುರ ಮತ್ತು ಅಜಮಗಡ್ ಜಿಲ್ಲೆಗಳಲ್ಲಿ ೪೦೦ ಮದರಸಾಗಳಲ್ಲಿ ಈ ಹಗರಣವಾಗಿರುವುದಾಗಿ ಶಂಕಿಸಲಾಗಿದೆ.

ಈ ಮದರಸಾಗಳನ್ನು ಸ್ಥಳದಲ್ಲೇ ಪರಿಶೀಲಿಸಲಾಗುವುದು. ಆದ್ದರಿಂದ ಕಾಗದದ ಮೇಲಿನ ಪರಿಸ್ಥಿತಿ ಮತ್ತು ನಿಜವಾದ ಪರಿಸ್ಥಿತಿಯ ನಡುವಿನ ವ್ಯತ್ಯಾಸವನ್ನು ಗಮನಿಸಬಹುದು. ಶಿಕ್ಷಕರ ಮತ್ತು ವಿದ್ಯಾರ್ಥಿಗಳ ‘ಪೊಲೀಸ್ ದಾಖಲೆಗಳು’ ಹಾಗೂ ಶಿಕ್ಷಕರ ದಾಖಲೆಗಳನ್ನು ಪರಿಶೀಲಿಸಲಾಗುವುದು. (ನಿಯಮಗಳ ಪ್ರಕಾರ ಹಾಗೆ ಮಾಡುವುದು ಕಡ್ಡಾಯವಾಗಿದ್ದರೂ, ಆಡಳಿತವು ಈ ಮದರಸಾಗಳಿಗೆ ಸರ್ಕಾರದ ಹಣವನ್ನು ಬಿತ್ತರಿಸಲು ಅನುಮತಿಯನ್ನು ಹೇಗೆ ನೀಡಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು! – ಸಂಪಾದಕರು)