ಇತಿಹಾಸ
ಯಾವ ದಿನ ಗಣೇಶ ಲಹರಿಗಳು ಪ್ರಥಮ ಬಾರಿ ಪೃಥ್ವಿಯ ಮೇಲೆ ಬಂದವೋ, ಅಂದರೆ ಯಾವ ದಿನ ಗಣೇಶನ ಜನ್ಮವಾಯಿತೋ, ಆ ದಿನವು ಮಾಘ ಶುಕ್ಲ ಚತುರ್ಥಿಯಾಗಿತ್ತು. ಅಂದಿನಿಂದ ಗಣಪತಿ ಮತ್ತು ಚತುರ್ಥಿಯ ಸಂಬಂಧವನ್ನು ಜೋಡಿಸಲಾಯಿತು.
ಗಣೇಶ ಜಯಂತಿ
ಮಾಘ ಶುಕ್ಲ ಚತುರ್ಥಿಯನ್ನು ‘ಗಣೇಶ ಜಯಂತಿ ಎಂದು ಆಚರಿಸುತ್ತಾರೆ. ಈ ತಿಥಿಯ ವೈಶಿಷ್ಟ್ಯವೆಂದರೆ, ಈ ತಿಥಿಯಂದು ಶ್ರೀ ಗಣೇಶನ ತತ್ತ್ವವು ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ.
ಮಹತ್ವ
ಗಣಪತಿಯ ಸ್ಪಂದನಗಳು ಮತ್ತು ಪೃಥ್ವಿಯ ಚತುರ್ಥಿ ತಿಥಿಯ ಸ್ಪಂದನಗಳು ಒಂದೇ ರೀತಿಯದ್ದಾಗಿರುತ್ತವೆ, ಆದುದರಿಂದ ಅವುಗಳು ಒಂದಕ್ಕೊಂದು ಅನುಕೂಲವಾಗಿರುತ್ತವೆ; ಅಂದರೆ ಆ ದಿನ ಗಣಪತಿಯ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರಬಹುದು. ಪ್ರತಿ ತಿಂಗಳ ಚತುರ್ಥಿಯ ದಿನ ಗಣಪತಿಯ ತತ್ತ್ವವು ಇತರ ದಿನಗಳ ತುಲನೆಯಲ್ಲಿ ಪೃಥ್ವಿಯ ಮೇಲೆ ೧೦೦ ಪಟ್ಟು ಹೆಚ್ಚಿಗೆ ಕಾರ್ಯನಿರತವಾಗಿರುತ್ತದೆ. ಈ ತಿಥಿಯಂದು ಶ್ರೀ ಗಣೇಶನ ಉಪಾಸನೆಯನ್ನು ಮಾಡಿದರೆ ಗಣೇಶತತ್ತ್ವದಿಂದ ಹೆಚ್ಚು ಲಾಭವಾಗುತ್ತದೆ.
ಶ್ರೀ ಗಣೇಶ ಚತುರ್ಥಿ ಮಹತ್ವ
ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುರ್ಣಿಮೆಯವರೆಗಿನ ೧೨೦ ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಹೆಚ್ಚು ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ಈ ಕಾಲದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ತೀವ್ರತೆಯ ಕಾಲದಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮ ಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.
(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಶ್ರೀ ಗಣಪತಿ)

ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ಸಂತ ಕಬೀರ ಜಯಂತಿ
ಛತ್ರಪತಿ ಸಂಭಾಜಿ ಮಹಾರಾಜ ಜಯಂತಿ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ರಾಣಿ ಲಕ್ಷ್ಮೀಬಾಯಿ ಬಲಿದಾನದಿನ ( ೨೧.೬.೨೦೨೬ )
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !