ಉತ್ತರಾಖಂಡದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆಯಲಿರುವ ಕುಂಭಮೇಳಾದ ಆಯೋಜನೆ ಬಗ್ಗೆ ಸಂತರು ಮತ್ತು ಮಹಂತರು ಅಸಮಾಧಾನ ಹೊಂದಿದ್ದರೆ, ಇದರ ಬಗ್ಗೆ ಸರಕಾರ ವಿಚಾರ ಮಾಡಬೇಕು!
ಹರಿದ್ವಾರ (ಉತ್ತರಾಖಂಡ) – ರಾಜ್ಯ ಸರ್ಕಾರವು ತನ್ನದೇ ಆದ ನ್ಯೂನತೆಗಳನ್ನು ಮರೆಮಾಚಲು ಕರೋನಾ ಹೆಸರಿನಲ್ಲಿ ತೆಗೆದುಕೊಂಡ ನಿರ್ಧಾರವನ್ನು ಸಂತರ ತಲೆಗೆ ಕಟ್ಟುತ್ತಿದ್ದಾರೆ ಎಂದು ಅಖಿಲ ಭಾರತ ಅಖಾಡಾ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಆರೋಪಿಸಿದ್ದಾರೆ. ಕುಂಭಮೇಳದ ಸಂದರ್ಭದಲ್ಲಿ ಸರಕಾರವು ಸಂತರಿಗೆ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಅವರು ಟೀಕಿಸಿದರು. ಸಂನ್ಯಾಸಿ ಅಖಾಡಾಗಳು ಮತ್ತು ಸಂತರೊಂದಿಗೆ ಚರ್ಚಿಸಿದ ನಂತರ ಅವರು ಮಾತನಾಡುತ್ತಿದ್ದರು. ಸರಕಾರವು ಸೌಲಭ್ಯಗಳನ್ನು ಒದಗಿಸದಿರುವ ಬಗ್ಗೆ ಸಂನ್ಯಾಸಿ ಅಖಾಡಗಳು ಅಸಮಾಧಾನ ಹೊಂದಿದ್ದರಿಂದ ಮಹಂತ್ ಗಿರಿ ಸಂತರ ಅಖಾಡಾದವರನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದರು. ಮಹಾಂತ್ ನರೇಂದ್ರ ಗಿರಿ ಅವರು ಪ್ರಯಾಗರಾಜ್ ಮತ್ತು ವೃಂದಾವನದ ಕುಂಭದಲ್ಲಿ ನಮಗೆ ಯಾವುದೇ ಸಮಸ್ಯೆ ಉಂಟಾಗದಿರುವಾಗ, ದೇವಭೂಮಿಯಲ್ಲಿ ಹೇಗೆ ಸಮಸ್ಯೆ ಉಂಟಾಗುತ್ತದೆ ? ಅಖಿಲ ಭಾರತೀಯ ಅಖಾಡಾ ಪರಿಷತ್ಗೆ ಹೇಳಿ ಮುಖ್ಯಮಂತ್ರಿ ೪ ರಾಜಯೋಗಿ ಸ್ನಾನಗಳನ್ನು ಘೋಷಿಸಿದ್ದರು; ಆದಾಗ್ಯೂ, ಸಂತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸರಕಾರವು ಅದರ ಸಂಖ್ಯೆಯನ್ನು ಎರಡಕ್ಕೆ ಇಳಿಸಿತು ಮತ್ತು ಕುಂಭದ ಅವಧಿಯನ್ನು ಕಡಿಮೆ ಮಾಡಿತು. ಸರಕಾರದ ನಿರ್ಧಾರಗಳನ್ನು ಸಂತರು ಒಪ್ಪಿಕೊಳ್ಳುವುದಿಲ್ಲ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !