
ಹರಿದ್ವಾರ (ಉತ್ತರಾಖಂಡ) – ಉತ್ತರಾಖಂಡವನ್ನು ಉತ್ತರ ಪ್ರದೇಶದಿಂದ ಬೇರ್ಪಡಿಸಿದ ನಂತರ, ಹರಿದ್ವಾರದ ‘ಹರಕಿ ಪೌಡಿ’ಯ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಮುಸಲ್ಮಾನರು ಭೂಮಿಯನ್ನು ಖರೀದಿಸಲು ಅಥವಾ ಬಾಡಿಗೆಗೆ ನೀಡಲು ಸಾಧ್ಯವಿಲ್ಲ ಎಂಬ ಕಾನೂನು ಜಾರಿಗೆ ಬಂದಿತ್ತು; ಆದರೆ ಪ್ರಸ್ತುತ, ಮುಸಲ್ಮಾನರು ಈ ಪ್ರದೇಶವನ್ನು ಅಕ್ರಮವಾಗಿ ಅತಿಕ್ರಮಿಸಿದ್ದಾರೆ. ಸಾಧು ಸಂತರ ಭೂಮಿಯನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ. ಅದಕ್ಕಾಗಿಯೇ ಒಂದು ಗುಂಪು ಕಾರ್ಯನಿರತವಾಗಿದೆ. ಈ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡುವುದು ಅವಶ್ಯಕ ಎಂದು ಜುನಾ ಅಖಾಡದ ಸ್ವಾಮಿ ಅವಧೇಶಾನಂದರು ಪ್ರತಿಪಾದಿಸಿದರು. ಹಿಂದೂ ಜನಜಾಗೃತಿ ಸಮಿತಿಯ ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯ ಸಂಮನ್ವಯಕ ಶ್ರೀ. ಆನಂದ್ ಜಖೋಟಿಯಾ ಮತ್ತು ಶ್ರೀ. ರಾಜೇಶ್ ಉಮರಾಣಿಯವರು ‘ಹಿಂದೂ ರಾಷ್ಟ್ರ ಸಂಪರ್ಕ ಅಭಿಯಾನ’ದ ನಿಮಿತ್ತ ಸ್ವಾಮೀಜಿಯನ್ನು ಭೇಟಿಯಾದರು. ಆ ಸಮಯದಲ್ಲಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು, ‘ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ. ನಾವು ಖಂಡಿತವಾಗಿಯೂ ನಿಮ್ಮ ಕೇಂದ್ರಕ್ಕೆ ಭೇಟಿ ನೀಡುತ್ತೇವೆ’ ಎಂದು ಹೇಳಿದರು.
ಸ್ವಾಮೀಜಿಯವರು ತಮ್ಮ ಮಾತನ್ನು ಮುಂದುವರೆಸುತ್ತಾ, ಪಾಲಘರನಲ್ಲಸಗಿದ್ದ ಸಾಧುಗಳ ಹತ್ಯೆಯ ಬಗ್ಗೆ ಇಡೀ ಸಾಧು ಸಮುದಾಯವು ಇಂದು ಒಗ್ಗೂಡಿದ್ದರೆ, ಪಿತೂರಿಗಾರರಿಗೆ ಸರಿಯಾದ ಉತ್ತರ ಸಿಗುತ್ತಿತ್ತು ಆದರೆ ಅಂತಹ ವಿಷಯಗಳಲ್ಲಿ ಸಾಧುಗಳು ಅಥವಾ ಸಾಮಾನ್ಯ ಹಿಂದೂಗಳ ಸಹಾಯ ಸಿಗುವುದಿಲ್ಲ ! ಸಾಧುಗಳಿಗೆ ಸಾಧುಗಳಾಗಿ ಬದುಕುವುದು ಕಷ್ಟಕರವಾಗಿದೆ ಎಂದು ಸ್ವಾಮೀಜಿ ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !