ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಬೆಲೆಬಾಳುವ ವಸ್ತುಗಳು ಕಳವು

ಇಂತಹ ಕಳ್ಳರನ್ನು ಗಲ್ಲಿಗೇರಿಸಬೇಕು !

ಅಮಾನವೀಯತೆಯು ಪರಾಕಾಷ್ಠೆಗೆ ತಲುಪಿರುವುದಕ್ಕೆ ಈ ಘಟನೆಯೇ ಸಾಕ್ಷಿ! ಇಂತಹ ಸ್ಥಿತಿಯಿರುವಾಗ ಭಾರತವನ್ನು ವಿಶ್ವಗುರುವಿನ ಸ್ಥಾನದಲ್ಲಿ ವಿರಾಜಮಾನಗೊಳಿಸಲು ಎಷ್ಟು ಪ್ರಯತ್ನ ಮಾಡಬೇಕು ಎಂಬುದು ಗಮನಕ್ಕೆ ಬರುತ್ತದೆ

ಸಾಂಧರ್ಭಿಕ ಚಿತ್ರ

ಬೆಂಗಳೂರು : ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿವೊಬ್ಬರಿಂದ ಬೆಲೆಬಾಳುವ ವಸ್ತುಗಳನ್ನು ಆಸ್ಪತ್ರೆಯಲ್ಲಿ ಕಳವು ಮಾಡಿರುವ ಆರೋಪ ಕೇಳಿಬಂದಿದೆ. ಅತ್ತಿಬೆಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದರು. ಅವರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿರುವ ಬಗ್ಗೆ ಅವರ ಪುತ್ರಿ ಆರೋಪಿಸಿದ್ದಾರೆ.
ತಂದೆಯನ್ನು ಆಸ್ಪತ್ರೆಗೆ ಸೇರಿಸುವಾಗ ಬಂಗಾರದ ಆಭರಣಗಳು ಹಾಗೂ ಮೊಬೈಲ್ ಅವರ ಬಳಿ ಇತ್ತು. ಆದರೆ, ಮೃತಪಟ್ಟ ನಂತರ ಅವೆಲ್ಲವೂ ನಾಪತ್ತೆಯಾಗಿವೆ. ಅದರ ಬಗ್ಗೆ ಕೇಳಿದರೆ ಅವರ ಮೈಮೇಲೆ ಏನೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕಳ್ಳತನವಾಗುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.