ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ತೆರಳಿ ಸೋಂಕಿತರ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಈ ರೀತಿ ರಾಜಕಾರಣಿಯಾದರೂ ಮಾಡುತ್ತಾರೆಯೇ ?

ಮಂಡ್ಯ – ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿಕೊಂಡು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಗುಣಮುಖರಾಗಲಿ ಎಂದು ಆಶೀರ್ವದಿಸಿ ಹಣ್ಣು-ಹಂಪಲು ನೀಡಿದ್ದಾರೆ. ಈ ವೇಳೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಪಿಪಿಇ ಕಿಟ್ ಧರಿಸಿದ್ದರು