ಸತ್ತವರ ನೆತ್ತಿಯ ಮೇಲಿನ ಬೆಣ್ಣೆ ತಿನ್ನುವಂತಹ ಸಿಬ್ಬಂದಿಯನ್ನು ಗಲ್ಲಿಗೇರಿಸುವ ಶಿಕ್ಷೆ ನೀಡಿ !
ಬೆಂಗಳೂರು – ಬೀದಿ ಬೀದಿ ವ್ಯಾಪಾರ ಮಾಡುವ ರಾಧಮ್ಮ ಹೆಸರಿನ ಮಹಿಳೆ ಬಡ್ಡಿ ಸಹಿತ ಸಾಲ ತಂದು ಆಯಂಬುಲೆನ್ಸ್ಗೆ ೫ ಸಾವಿರ ಹಾಗೂ ಚಿತಾಗಾರ ಸಿಬ್ಬಂದಿಗೆ ೩ ಸಾವಿರ ನೀಡಿ ಮೃತ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ದಾರುಣ ಘಟನೆಯು ಶುಕ್ರವಾರ ಯಲಹಂಕದ ಮೇಡಿ ಚಿತಾಗಾರದಲ್ಲಿ ನಡೆದಿದೆ.
ಶವವನ್ನು ಆಯಂಬುಲೆನ್ಸ್ ಮೂಲಕ ಯಲಹಂಕ ಮೇಡಿ ಚಿತಾಗಾರಕ್ಕೆ ತರಲಾಗಿತ್ತು. ಈ ವೇಳೆ ‘ಹಣ ನೀಡಿದರೆ ಮಾತ್ರ ಶವ ಅಂತ್ಯಕ್ರಿಯೆ ನೆರವೇರಿಸುವುದಾಗಿ’ ಚಿತಾಗಾರದ ಸಿಬ್ಬಂದಿಯು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಆಂಬುಲೆನ್ಸ್ ಚಾಲಕನೂ ಹೆಚ್ಚು ಹಣ ಕೇಳಿದ್ದಾನೆ. ರಾಧಮ್ಮ ಕೈ ಮುಗಿದು ಕೇಳಿಕೊಂಡಿದ್ದಾರೆ. ಆದರೆ ಸಿಬ್ಬಂದಿ ಕೇಳಲಿಲ್ಲ. ಅನಿವಾರ್ಯವಾಗಿ ರಾಧಮ್ಮ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಬಡ್ಡಿಗೆ ಸಾಲ ತಂದು ಹಣ ನೀಡಿದ್ದಾರೆ.
ಹಣ ಪಡೆದ ಚಿತಾಗಾರ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡ ಪ್ರಜಾ ಪರಿವರ್ತನಾ ವೇದಿಕೆ ಸದಸ್ಯರು ಸ್ಥಳದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಈ ವೇಳೆ ಸಿಬ್ಬಂದಿ ಹಾಗೂ ವೇದಿಕೆ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಡವರನ್ನು ದೋಚುವ ಚಿತಾಗಾರ ಸಿಬ್ಬಂದಿಗಳ ಸುಲಿಗೆ ನಿಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ