ಸತ್ತವರ ನೆತ್ತಿಯ ಮೇಲಿನ ಬೆಣ್ಣೆ ತಿನ್ನುವಂತಹ ಸಿಬ್ಬಂದಿಯನ್ನು ಗಲ್ಲಿಗೇರಿಸುವ ಶಿಕ್ಷೆ ನೀಡಿ !
ಬೆಂಗಳೂರು – ಬೀದಿ ಬೀದಿ ವ್ಯಾಪಾರ ಮಾಡುವ ರಾಧಮ್ಮ ಹೆಸರಿನ ಮಹಿಳೆ ಬಡ್ಡಿ ಸಹಿತ ಸಾಲ ತಂದು ಆಯಂಬುಲೆನ್ಸ್ಗೆ ೫ ಸಾವಿರ ಹಾಗೂ ಚಿತಾಗಾರ ಸಿಬ್ಬಂದಿಗೆ ೩ ಸಾವಿರ ನೀಡಿ ಮೃತ ಸೋಂಕಿತನ ಅಂತ್ಯಕ್ರಿಯೆ ನೆರವೇರಿಸಿದ ದಾರುಣ ಘಟನೆಯು ಶುಕ್ರವಾರ ಯಲಹಂಕದ ಮೇಡಿ ಚಿತಾಗಾರದಲ್ಲಿ ನಡೆದಿದೆ.
ಶವವನ್ನು ಆಯಂಬುಲೆನ್ಸ್ ಮೂಲಕ ಯಲಹಂಕ ಮೇಡಿ ಚಿತಾಗಾರಕ್ಕೆ ತರಲಾಗಿತ್ತು. ಈ ವೇಳೆ ‘ಹಣ ನೀಡಿದರೆ ಮಾತ್ರ ಶವ ಅಂತ್ಯಕ್ರಿಯೆ ನೆರವೇರಿಸುವುದಾಗಿ’ ಚಿತಾಗಾರದ ಸಿಬ್ಬಂದಿಯು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಆಂಬುಲೆನ್ಸ್ ಚಾಲಕನೂ ಹೆಚ್ಚು ಹಣ ಕೇಳಿದ್ದಾನೆ. ರಾಧಮ್ಮ ಕೈ ಮುಗಿದು ಕೇಳಿಕೊಂಡಿದ್ದಾರೆ. ಆದರೆ ಸಿಬ್ಬಂದಿ ಕೇಳಲಿಲ್ಲ. ಅನಿವಾರ್ಯವಾಗಿ ರಾಧಮ್ಮ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಬಡ್ಡಿಗೆ ಸಾಲ ತಂದು ಹಣ ನೀಡಿದ್ದಾರೆ.
ಹಣ ಪಡೆದ ಚಿತಾಗಾರ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡ ಪ್ರಜಾ ಪರಿವರ್ತನಾ ವೇದಿಕೆ ಸದಸ್ಯರು ಸ್ಥಳದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಈ ವೇಳೆ ಸಿಬ್ಬಂದಿ ಹಾಗೂ ವೇದಿಕೆ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಡವರನ್ನು ದೋಚುವ ಚಿತಾಗಾರ ಸಿಬ್ಬಂದಿಗಳ ಸುಲಿಗೆ ನಿಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಇಂದಿನ ಕಾಲದಲ್ಲಿ ವೈಕುಂಠಗಮನ ಎಂದೆಲ್ಲಾ ಹೇಳುವುದನ್ನು ನಾನು ಒಪ್ಪುವುದಿಲ್ಲ, ಇವು ನಿರ್ದಿಷ್ಟ ವರ್ಗವೊಂದು ಹೇರಿದ ಸಂಗತಿಗಳು! : Sharad Pawar on Sant Tukaram
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!