‘ಕೋವಿಡ್ ಟಾಸ್ಕ್ ಫೋರ್ಸ್’ನ ಸದಸ್ಯರಿಂದ ಕೇಂದ್ರ ಸರಕಾರಕ್ಕೆ ಸಲಹೆ

ನವ ದೆಹಲಿ – ಸಂಚಾರ ನಿಷೇಧ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ ಎಂದು ನಾವು ಕಳೆದ ಕೆಲವು ದಿನಗಳಿಂದ ಹೇಳುತ್ತಿದ್ದೇವೆ. ನಾವು ಪ್ರಸ್ತುತ ಭಾಗಶಃ ನಿಷೇಧವನ್ನು ಹೇರಿದ್ದೇವೆ. ಹಾಗೆ ಅಲ್ಲ, ರಾಷ್ಟ್ರವ್ಯಾಪಿ ಸಂಚಾರ ನಿಷೇಧವನ್ನು ಹೇರಬೇಕು; ಏಕೆಂದರೆ ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿದೆ. ಎಂದು ‘ಕೋವಿಡ್ ಟಾಸ್ಕ್ ಫೋರ್ಸ್’ನ ಸದಸ್ಯರು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದ್ದಾರೆ. ವಿ.ಕೆ. ಪಾಲ್ ಇವರು ಈ ಟಾಸ್ಕ್ ಫೋರ್ಸ್ನ ಮುಖ್ಯಸ್ಥರಾಗಿದ್ದು ಅವರು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡುತ್ತಿರುತ್ತಾರೆ. ಟಾಸ್ಕ್ ಫೋರ್ಸ್ನಲ್ಲಿ ಏಮ್ಸ್ ಮತ್ತು ಐಸಿಎಂಆರ್ ನಂತಹ ಸಂಸ್ಥೆಗಳ ತಜ್ಞರು ಒಳಗೊಂಡಿದ್ದಾರೆ.
‘ನಾವು ಪರಿಸ್ಥಿತಿಯನ್ನು ತಪ್ಪು ದೃಷ್ಟಿಕೋನದಿಂದ ನೋಡುತ್ತಿದ್ದೇವೆ’ ಎಂದು ಈ ಫೋರ್ಸ್ನ ಸದಸ್ಯರೊಬ್ಬರು ಹೇಳಿದರು. ಆರೋಗ್ಯ ವ್ಯವಸ್ಥೆಯನ್ನು ಉತ್ತಮಗೊಳಿಸಲು ಒಂದು ಮಿತಿ ಇರುತ್ತದೆ. ನಾವು ಆಮ್ಲಜನಕದ ಪೂರೈಕೆಯನ್ನು ಸುಧಾರಿಸಿದ್ದೇವೆ; ಆದರೆ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯನ್ನು ಗಮನಿಸಿದರೆ, ಇನ್ನೂ ಆಮ್ಲಜನಕದ ಕೊರತೆಯಿದೆ. ಕೊರೋನಾ ಸೋಂಕು ಒಂದು ವ್ಯಕ್ತಿಯಿಂದ ಮತ್ತೊಂದು ವ್ಯಕ್ತಿಗೆ ಹರಡುತ್ತದೆ. ಇಂತಹ ಸಮಯದಲ್ಲಿ ನಿಷೇಧವನ್ನು ಹೇರುವ ಮೂಲಕ ಸೋಂಕಿನ ಸರಪಳಿಯನ್ನು ಮುರಿಯುವುದು ಅತ್ಯಂತ ಯೋಗ್ಯವಾದ ಮಾರ್ಗವಾಗಿದೆ ಎಂದು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !