‘ಕೋವಿಡ್ ಟಾಸ್ಕ್ ಫೋರ್ಸ್’ನ ಸದಸ್ಯರಿಂದ ಕೇಂದ್ರ ಸರಕಾರಕ್ಕೆ ಸಲಹೆ

ನವ ದೆಹಲಿ – ಸಂಚಾರ ನಿಷೇಧ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ ಎಂದು ನಾವು ಕಳೆದ ಕೆಲವು ದಿನಗಳಿಂದ ಹೇಳುತ್ತಿದ್ದೇವೆ. ನಾವು ಪ್ರಸ್ತುತ ಭಾಗಶಃ ನಿಷೇಧವನ್ನು ಹೇರಿದ್ದೇವೆ. ಹಾಗೆ ಅಲ್ಲ, ರಾಷ್ಟ್ರವ್ಯಾಪಿ ಸಂಚಾರ ನಿಷೇಧವನ್ನು ಹೇರಬೇಕು; ಏಕೆಂದರೆ ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿದೆ. ಎಂದು ‘ಕೋವಿಡ್ ಟಾಸ್ಕ್ ಫೋರ್ಸ್’ನ ಸದಸ್ಯರು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದ್ದಾರೆ. ವಿ.ಕೆ. ಪಾಲ್ ಇವರು ಈ ಟಾಸ್ಕ್ ಫೋರ್ಸ್ನ ಮುಖ್ಯಸ್ಥರಾಗಿದ್ದು ಅವರು ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡುತ್ತಿರುತ್ತಾರೆ. ಟಾಸ್ಕ್ ಫೋರ್ಸ್ನಲ್ಲಿ ಏಮ್ಸ್ ಮತ್ತು ಐಸಿಎಂಆರ್ ನಂತಹ ಸಂಸ್ಥೆಗಳ ತಜ್ಞರು ಒಳಗೊಂಡಿದ್ದಾರೆ.
‘ನಾವು ಪರಿಸ್ಥಿತಿಯನ್ನು ತಪ್ಪು ದೃಷ್ಟಿಕೋನದಿಂದ ನೋಡುತ್ತಿದ್ದೇವೆ’ ಎಂದು ಈ ಫೋರ್ಸ್ನ ಸದಸ್ಯರೊಬ್ಬರು ಹೇಳಿದರು. ಆರೋಗ್ಯ ವ್ಯವಸ್ಥೆಯನ್ನು ಉತ್ತಮಗೊಳಿಸಲು ಒಂದು ಮಿತಿ ಇರುತ್ತದೆ. ನಾವು ಆಮ್ಲಜನಕದ ಪೂರೈಕೆಯನ್ನು ಸುಧಾರಿಸಿದ್ದೇವೆ; ಆದರೆ ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯನ್ನು ಗಮನಿಸಿದರೆ, ಇನ್ನೂ ಆಮ್ಲಜನಕದ ಕೊರತೆಯಿದೆ. ಕೊರೋನಾ ಸೋಂಕು ಒಂದು ವ್ಯಕ್ತಿಯಿಂದ ಮತ್ತೊಂದು ವ್ಯಕ್ತಿಗೆ ಹರಡುತ್ತದೆ. ಇಂತಹ ಸಮಯದಲ್ಲಿ ನಿಷೇಧವನ್ನು ಹೇರುವ ಮೂಲಕ ಸೋಂಕಿನ ಸರಪಳಿಯನ್ನು ಮುರಿಯುವುದು ಅತ್ಯಂತ ಯೋಗ್ಯವಾದ ಮಾರ್ಗವಾಗಿದೆ ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!