
ಬೆಂಗಳೂರು – ಮಧ್ಯವರ್ತಿಗಳು ಬೆಂಗಳೂರಿನಲ್ಲಿರುವ ಯಾವುದೇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಸಿಗೆ ಒದಗಿಸಲು ಲಂಚ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಸೂರ್ಯ ಅವರು, ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಹೊರಗಿನ ದಲ್ಲಾಳಿಗಳು, ಕೊವಿಡ್ ವಾರ್ ರೂಮ್ ಮತ್ತು ಕಾಲ್ ಸೆಂಟರ್ ಮುಖ್ಯಸ್ಥರು ಈ ಹಗರಣವನ್ನು ನಡೆಸುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ, ಕೊರೋನಾದ ಯಾವುದೇ ಲಕ್ಷಣಗಳಿಲ್ಲದ ವ್ಯಕ್ತಿಯ ಹೆಸರಿನಲ್ಲಿ ಹಾಸಿಗೆಯನ್ನು ಕಾಯ್ದಿರಿಸಲಾಗುತ್ತದೆ ನಂತರ ೧೨ ಗಂಟೆಗಳ ನಂತರ ಲಂಚ ತೆಗೆದುಕೊಂಡು ಕೊರೋನಾ ರೋಗಿಗಳಿಗೆ ನೀಡಲಾಗುತ್ತದೆ. ಕಳೆದ ೭-೮ ದಿನಗಳಲ್ಲಿ ಇಂತಹ ೪೦೬೫ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಅವರು ಹೇಳಿದ್ದಾರೆ. ತಮ್ಮ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುವುದಾದರೆ ಆಸ್ಪತ್ರೆಯ ಕಂಪ್ಯೂಟರ್ನಲ್ಲಿನ ಡೇಟಾವನ್ನು ವಿಶ್ಲೇಷಿಸಲು ಅವರು ಹೇಳಿದರು. ‘ರೋಗಿಗಳು ಡಿಸ್ಚಾರ್ಜ್ ಆದ ನಂತರ ಅಥವಾ ಸತ್ತ ನಂತರವೂ ಹಾಸಿಗೆಗಳು ಲಭ್ಯವಿಲ್ಲ; ಅದು ಹೇಗೆ ?’ ಎಂದು ಸೂರ್ಯ ಕೇಳಿದರು.
ಬೆಂಗಳೂರಲ್ಲಿ ಕೋವಿಡ್ ಬೆಡ್ ಬ್ಲಾಕಿಂಗ್ ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ!
#TejasviSurya https://t.co/O7uX6VBSc4— vijaykarnataka (@Vijaykarnataka) May 4, 2021
ತೇಜಸ್ವಿ ಸೂರ್ಯ ಅವರನ್ನು ಚರ್ಚೆಗೆ ಕರೆಯಲಾಗಿದೆ ! – ಮುಖ್ಯಮಂತ್ರಿ ಯಡಿಯೂರಪ್ಪ
ಬಿಜೆಪಿ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ತೇಜಸ್ವಿ ಸೂರ್ಯ ಇವರು ದೊಡ್ಡ ಹಗರಣವನ್ನು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಚರ್ಚಿಸಲು ನಾವು ಅವರನ್ನು ಕರೆದಿದ್ದೇವೆ ಎಂದು ಹೇಳಿದ್ದಾರೆ.
(ಸೌಜನ್ಯ : Tv9 Kannada)
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್