
‘ಯುಗಾದಿಯ ಶುಭಮುಹೂರ್ತದಂದು ಊಳಿದ ಹೊಲದ ಸಾಗುವಳಿಯ ಕೆಲಸವನ್ನು ಅಕ್ಷಯ ತದಿಗೆಯ ಒಳಗೆ ಪೂರ್ಣಗೊಳಿಸಬೇಕು. ಅಕ್ಷಯ ತದಿಗೆಯಂದು ಸಾಗುವಳಿ ಮಾಡಿದ ಜಮೀನಿನಲ್ಲಿರುವ ಮಣ್ಣನ್ನು ಕೃತಜ್ಞತೆಯ ಭಾವದಿಂದ ಪೂಜಿಸಬೇಕು. ಅನಂತರ ಪೂಜಿಸಿದ ಮಣ್ಣಿನಲ್ಲಿ ಹೊಂಡಗಳನ್ನು ಮಾಡಬೇಕು ಮತ್ತು ಆ ಹೊಂಡಗಳಲ್ಲಿ ಬೀಜಗಳನ್ನು ಬಿತ್ತಬೇಕು. ಅಕ್ಷಯ ತದಿಗೆಯ ಮುಹೂರ್ತದಲ್ಲಿ ಬೀಜಗಳನ್ನು ಬಿತ್ತಲು ಪ್ರಾರಂಭಿಸಿದರೆ ಆ ದಿನ ವಾತಾವರಣದಲ್ಲಿ ಕಾರ್ಯನಿರತವಾಗಿರುವ ದೈವೀ ಶಕ್ತಿಯು ಬೀಜಗಳಲ್ಲಿ ಬರುವುದರಿಂದ ಸಮೃದ್ಧವಾದ ಫಸಲು ಬರುತ್ತದೆ. ಇದೇ ರೀತಿಯಲ್ಲಿ ಅಕ್ಷಯ ತದಿಗೆಯಂದು ಹೊಂಡಗಳನ್ನು ಮಾಡಿ ಗಿಡಗಳನ್ನು ನೆಟ್ಟರೆ ಹಣ್ಣಿನ ತೋಟವೂ ಹೇರಳವಾದ ಉತ್ಪಾದನೆಯನ್ನು ನೀಡುತ್ತದೆ.
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯಂದು ‘ಸತ್ಪಾತ್ರೆ ದಾನ’ ಮಾಡಿ ‘ಅಕ್ಷಯ ದಾನ’ದ ಫಲ ಪಡೆಯಿರಿ !
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !
ಅಕ್ಷಯ ತದಿಗೆಯಂದು ಬೀಜ ಬಿತ್ತನೆಯ ಲಾಭ !