ಆಕಾಶದಾದ್ಯಂತ ಹಾರಾಡಿತು ಶ್ರೀರಾಮನ ವಿಜಯಪತಾಕೆ |
ಪ್ರತಿಧ್ವನಿಸಿತು ಹಿಂದೂ ರಾಷ್ಟ್ರದ ಆಹ್ವಾನದ ಕರೆ ||

ರಾಮನಾಥಿ (ಗೋವಾ), – ಅಕ್ಷಯ ತದಿಗೆಯು ಅವಿನಾಶೀ ತತ್ತ್ವದ ಪ್ರತೀಕವಾಗಿದೆ. ಈ ಶುಭದಿನದಂದು (೧೪.೫.೨೦೨೧ ರಂದು) ಸಪ್ತರ್ಷಿಗಳ ಆಜ್ಞೆಯಂತೆ ಸನಾತನದ ರಾಮನಾಥಿ (ಗೋವಾ) ಆಶ್ರಮ ದಲ್ಲಿ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಶುಭಹಸ್ತದಿಂದ ಧರ್ಮಧ್ವಜವನ್ನು ಸ್ಥಾಪಿಸಲಾಯಿತು. ಆರಂಭದಲ್ಲಿ ಚೈತನ್ಯಮಯ ವಾತಾವರಣದಲ್ಲಿ ಶಾಸ್ತ್ರೋಕ್ತವಾಗಿ ಧರ್ಮಧ್ವಜದ ಪೂಜೆಯನ್ನು ಮಾಡಲಾಯಿತು. ನಂತರ ಶಂಖ ಹಾಗೂ ಗಂಟೆಯನಾದ ಘೋಷ ಸಹಿತ ಧ್ವಜಾರೋಹಣವನ್ನು ಮಾಡಲಾಯಿತು. ಈ ವಿಧಿಯ ಪೌರೋಹಿತ್ಯವನ್ನು ಸನಾತನದ ಪುರೋಹಿತರಾದ ಶ್ರೀ. ಅಮರ ಜೋಶಿ ಮತ್ತು ಶ್ರೀ. ಚೈತನ್ಯ ದೀಕ್ಷಿತ ಇವರು ನಿರ್ವಹಿಸಿದ್ದರು.
ಸಪ್ತರ್ಷಿಗಳು ಪೂ. ಡಾ. ಓಂ ಉಲಗನಾಥನ್ ಇವರ ಮಾಧ್ಯಮದಿಂದ ಈ ಧರ್ಮಧ್ವಜದ ಒಂದು ಬದಿಯಲ್ಲಿ ಪ್ರಭು ಶ್ರೀರಾಮನ ಚಿತ್ರ, ಮತ್ತೊಂದು ಬದಿಯಲ್ಲಿ ಪರಾತ್ಪರ ಗುರು ಡಾ. ಆಠವಲೆ ಇವರ ಪ್ರಭು ಶ್ರೀರಾಮನ ಸ್ವರೂಪದಲ್ಲಿರುವ ಚಿತ್ರವನ್ನು ಹಾಕುವಂತೆ ಆಜ್ಞೆ ನೀಡಿದ್ದರು. ಅದಕ್ಕನುಸಾರ ಈ ಬಟ್ಟೆಯ ಧ್ವಜವನ್ನು ತಯಾರಿಸಲಾಯಿತು. ‘ಈ ಧರ್ಮಧ್ವಜವು ಹಿಂದೂ ರಾಷ್ಟ್ರವು ಸಮೀಪಿಸುತ್ತಿರುವುದರ ಪ್ರತೀಕವಾಗಿದೆ. ಈ ಧರ್ಮಧ್ವಜದ ಸ್ಥಾಪನೆಯಿಂದ ಎಲ್ಲ ಕಡೆಗಳಲ್ಲಿ ಹಿಂದೂ ಧರ್ಮದ ಕೀರ್ತಿ ಹೆಚ್ಚಾಗಲಿದೆ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆಗೆ ವೇಗವು ಸಿಗಲಿದೆ, ಎಂದು ಸಪ್ತರ್ಷಿಗಳು ಆಶೀರ್ವಚನವನ್ನು ನೀಡಿದ್ದರು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !