ಈಗ ಆಯುರ್ವೇದದ ಮಹತ್ವವು ಗಮನಕ್ಕೆ ಬರುತ್ತಿರುವುದರಿಂದ, ಇಂತಹ ಚಿಕಿತ್ಸೆಗಳು ಸರಕಾರಿ ಹಂತದಲ್ಲಿ ನಡೆಯುತ್ತಿದ್ದರೆ ಅದು ಶ್ಲಾಘನೀಯವಾಗಿದೆ! ಇಂತಹ ಪ್ರಯತ್ನಗಳು ದೇಶದೆಲ್ಲೆಡೆ ಆಗಬೇಕು !

ನವ ದೆಹಲಿ – ಕೊರೊನಾದಿಂದ ಗುಣಮುಖರಾದ ರೋಗಿಗಳಿಗೆ ಆಯುರ್ವೇದ ಮತ್ತು ಪಂಚಕರ್ಮಗಳ ಸಹಾಯದಿಂದ ಚಿಕಿತ್ಸೆ ನೀಡಲು ದೆಹಲಿ ಪುರಸಭೆಯ ಆಸ್ಪತ್ರೆಗಳಲ್ಲಿ ವಿಶೇಷ ವಿಭಾಗಗಳನ್ನು ಸ್ಥಾಪಿಸಲಿದೆ. ಕೊರೋನಾದಿಂದ ಗುಣಮುಖರಾದ ನಂತರ ವ್ಯಕ್ತಿಯು ಆಯಾಸಗೊಂಡಿರುತ್ತಾರೆ. ಅಲ್ಲದೆ, ಅವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರೆ, ಅದರ ಪರಿಣಾಮವೂ ಆಗುತ್ತಿರುತ್ತದೆ. ಅವರ ರೋಗ ನಿರೋಧಕ ಶಕ್ತಿ ದುರ್ಬಲವಾಗಿರುತ್ತದೆ. ಅಂತಹವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುವುದು.
ಪ್ರಶಾಂತ ವಿಹಾರ, ಪದಮ ನಗರ, ರಾಜೇಂದ್ರ ನಗರ, ಹೈದರಪುರ, ಬೇಗಮ್ಪುರ ಮತ್ತು ಕರಮಪುರಗಳಲ್ಲಿ ಪಂಚಕರ್ಮ ಆಸ್ಪತ್ರೆಗಳನ್ನು ‘ಪೋಸ್ಟ್ ಕೋವಿಡ್ ಕೇರ್’ ಆಸ್ಪತ್ರೆಗಳಾಗಿ ಪರಿವರ್ತಿಸಲಾಗುವುದು, ಕನಿಷ್ಠ ೧೦೦೦ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಉತ್ತರ ಪುರಸಭೆಯ ಮಹಾಪೌರ ಜಯಪ್ರಕಾಶ ಇವರು ತಿಳಿಸಿದ್ದಾರೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!