
ನವ ದೆಹಲಿ – ದೇಶದಲ್ಲಿ ೨೬/೧೧ ನಂತಹ ದೊಡ್ಡ ಭಯೋತ್ಪಾದಕ ದಾಳಿ ನಡೆಸುವ ಸಂಚು ರೂಪಿಸಲಾಗುತ್ತಿದೆ, ಎಂಬ ಮಾಹಿತಿಯನ್ನು ನೀಡುವ ದೂರವಾಣಿ ಕರೆ ಬಂದಿರುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.)ವು ಹೇಳಿದೆ. ಹಾಗಾಗಿ ಈ ಪ್ರಕರಣದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ಈ ದೂರವಾಣಿ ಕರೆಯು ಬಂಗಾಳದ ರಣಘಾಟ್ನಿಂದ ಬಂದಿರುವುದು ಬೆಳಕಿಗೆ ಬಂದಿದೆ. ಈ ದಾಳಿಗೆ ಸಂಬಂಧಿಸಿದಂತೆ ಗುಂಡುಗಳು (ಸ್ಟೀಲ ಬುಲೆಟ್) ಮತ್ತು ಬಾಂಬ್ಗಳನ್ನು ನೇಪಾಳ ಮತ್ತು ಬಾಂಗ್ಲಾದೇಶದ ಮೂಲಕ ಕಳ್ಳಸಾಗಣೆ ಮಾಡಿ ತರಲಾಗಿದೆ ಎಂದು ದೂರವಾಣಿ ಕರೆ ಮಾಡಿದವರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ೨೦ ರಂದು ಇದೇ ರೀತಿಯ ದೂರವಾಣಿ ಕರೆ ಬಂದಿತ್ತು. ಆ ಸಮಯದಲ್ಲಿ ಕರೆ ಮಾಡಿದವರು ತಾನು ಪಾಕಿಸ್ತಾನದ ಕರಾಚಿಯಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದು ಮುಂಬಯಿ ವಿಮಾನ ನಿಲ್ದಾಣ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದನು.
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಅಮೆರಿಕ ಮತ್ತು ಇರಾನ್ ನಡುವೆ ಪರಸ್ಪರರ ಮೇಲಿನ ದಾಳಿಗಳನ್ನು ನಿಲ್ಲಿಸಲು ಸಿದ್ಧತೆ : US-Iran War
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
…ಇರಾನ್ನ ಅಸ್ತಿತ್ವವನ್ನೇ ಅಳಿಸಿಹಾಕುತ್ತೇವೆ!