
ನವ ದೆಹಲಿ – ದೇಶದಲ್ಲಿ ೨೬/೧೧ ನಂತಹ ದೊಡ್ಡ ಭಯೋತ್ಪಾದಕ ದಾಳಿ ನಡೆಸುವ ಸಂಚು ರೂಪಿಸಲಾಗುತ್ತಿದೆ, ಎಂಬ ಮಾಹಿತಿಯನ್ನು ನೀಡುವ ದೂರವಾಣಿ ಕರೆ ಬಂದಿರುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.)ವು ಹೇಳಿದೆ. ಹಾಗಾಗಿ ಈ ಪ್ರಕರಣದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ಈ ದೂರವಾಣಿ ಕರೆಯು ಬಂಗಾಳದ ರಣಘಾಟ್ನಿಂದ ಬಂದಿರುವುದು ಬೆಳಕಿಗೆ ಬಂದಿದೆ. ಈ ದಾಳಿಗೆ ಸಂಬಂಧಿಸಿದಂತೆ ಗುಂಡುಗಳು (ಸ್ಟೀಲ ಬುಲೆಟ್) ಮತ್ತು ಬಾಂಬ್ಗಳನ್ನು ನೇಪಾಳ ಮತ್ತು ಬಾಂಗ್ಲಾದೇಶದ ಮೂಲಕ ಕಳ್ಳಸಾಗಣೆ ಮಾಡಿ ತರಲಾಗಿದೆ ಎಂದು ದೂರವಾಣಿ ಕರೆ ಮಾಡಿದವರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ೨೦ ರಂದು ಇದೇ ರೀತಿಯ ದೂರವಾಣಿ ಕರೆ ಬಂದಿತ್ತು. ಆ ಸಮಯದಲ್ಲಿ ಕರೆ ಮಾಡಿದವರು ತಾನು ಪಾಕಿಸ್ತಾನದ ಕರಾಚಿಯಿಂದ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದು ಮುಂಬಯಿ ವಿಮಾನ ನಿಲ್ದಾಣ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದನು.
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ
ಲೆಬನಾನ್: ಹಿಜ್ಬುಲ್ಲಾ ಮೇಲೆ ಇಸ್ರೇಲ್ ದಾಳಿ; ಟ್ರಂಪ್-ನೆತನ್ಯಾಹು ನಡುವೆ ವಾಗ್ವಾದ!
ತೃಣಮೂಲ ಕಾಂಗ್ರೆಸ್ಸಿನ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ಜನರ ಕಲ್ಲು ತೂರಾಟ
ದೆಹಲಿಯ ದೇವಸ್ಥಾನಗಳನ್ನು ಗುರಿಯಾಗಿಸುವ ಸಿದ್ಧತೆಯಲ್ಲಿದ್ದ 9 ಜನರ ಬಂಧನ !
ಸ್ವಿಟ್ಜರ್ಲ್ಯಾಂಡ್ ನ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಂದ ಚಾಕು ಇರಿತದ ಮೂಲಕ ಭಯೋತ್ಪಾದಕ ದಾಳಿ: 3 ಜನರಿಗೆ ಗಾಯ