
ನವ ದೆಹಲಿ – ಖಲಿಸ್ತಾನಿ ಭಯೋತ್ಪಾದಕ ಜರ್ನಲ್ಸಿಂಗ್ ಭಿಂದ್ರನವಾಲೆ ಅವರ ಮೃತ್ಯುದಿನದ ನಿಮಿತ್ತ ಶ್ರದ್ಧಾಂಜಲಿ ನೀಡುವ ಪೋಸ್ಟನ್ನು ಮಾಡಿದ್ದರಿಂದ ಭಾರತದ ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ಶ್ರದ್ಧಾಂಜಲಿ ಸಲ್ಲಿಸಿದ ನಂತರ ಹರಭಜನ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಟೀಕೆಗೆ ಗುರಿಯಾದರು. ಹರಭಜನ್ ಭಿಂದ್ರನವಾಲೆಯನ್ನು ‘ಹುತಾತ್ಮ’ ಎಂದು ಕರೆದಿದ್ದರು.
#HarbhajanSingh apologises for calling Khalistani terrorist #Bhindranwale ‘martyr’#KhalistaniTerrorist #Khalistan https://t.co/2KgbsdSIKL
— DNA (@dna) June 7, 2021
ಹರಭಜನ್ ಇವರು ಕ್ಷಮೆಯಾಚಿಸುವಾಗ ತಮ್ಮ ಟ್ವೀಟ್ನಲ್ಲಿ, ಸಂಬಂಧಪಟ್ಟ ಪೋಸ್ಟ್ ಅನ್ನು ನಾನು ಓದದೇ ಅಥವಾ ಅರ್ಥಮಾಡಿಕೊಳ್ಳದೆ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದೇನೆ; ನಾನು ಈ ಸಿದ್ಧಾಂತದ ಬೆಂಬಲಿಗನಲ್ಲ, ಆ ಬಗೆಗಿನ ಯಾವುದೇ ವ್ಯಕ್ತಿಯನ್ನು ನಾನು ಬೆಂಬಲಿಸುವುದಿಲ್ಲ. ನಾನು ಸಿಖ್ ಆಗಿದ್ದೇನೆ, ದೇಶದ ವಿರುದ್ಧ ಅಲ್ಲ, ದೇಶಕ್ಕಾಗಿ ಹೋರಾಡುತ್ತೇನೆ. ದೇಶದ ಜನರ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast