
ನವ ದೆಹಲಿ – ಕೊರೊನಾದ ಎರಡನೇ ಅಲೆಯು ಕಡಿಮೆಯಾಗುತ್ತಿದ್ದಂತೆ, ಅನೇಕ ರಾಜ್ಯಗಳು ಕೇಂದ್ರ ಗೃಹ ಸಚಿವಾಲಯ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಲು ಪ್ರಾರಂಭಿಸಿವೆ. ಇದರಿಂದ ಮತ್ತೆ ಬೀದಿಗಳಲ್ಲಿ, ಮಾರುಕಟ್ಟೆಗಳಲ್ಲಿ ಜನಸಂದಣಿ ಕಂಡುಬರುತ್ತಿದೆ. ಇದರಿಂದ ಕೇಂದ್ರ ಗೃಹ ಸಚಿವಾಲಯವು ಆತಂಕವನ್ನು ವ್ಯಕ್ತಪಡಿಸಿದೆ. ಕೇಂದ್ರ ಗೃಹ ಸಚಿವಾಲಯ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ನಡುವಿನ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ‘ಕರೋನಾಗೆ ಸಂಬಂಧಿಸಿದ ನಿಯಮಗಳನ್ನು ಜನರು ಪಾಲಿಸದಿದ್ದರೆ, ಕೊರೊನಾದ ಮೂರನೇ ಅಲೆಯು ತುಂಬಾ ಭಯಾನಕವಾಗಬಲ್ಲದು’ ಎಂಬ ಆತಂಕವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು. ನಂತರ ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಕೊರೊನಾದ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿತು. ನಾಗರಿಕರು ನಿಯಮಗಳನ್ನು ಉಲ್ಲಂಘಿಸುತ್ತಿದ್ದರೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಕಾರ್ಯದರ್ಶಿಗಳಿಗೆ ಆದೇಶಿಸಲಾಗಿದೆ. (ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಇತರ ನಾಗರಿಕರಿಗೂ ಅದರ ಭಯವಿಲ್ಲ ಮತ್ತು ಅವರು ಸಹ ಅದನ್ನು ಉಲ್ಲಂಘಿಸುತ್ತಾರೆ, ಆದ್ದರಿಂದ ಪೊಲೀಸರು ಮತ್ತು ಆಡಳಿತವೇ ಇದಕ್ಕೆ ಹೆಚ್ಚಿನ ಜವಾಬ್ದಾರವಾಗಿದೆ ! – ಸಂಪಾದಕ)
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!