ಪೊಲೀಸರು ಚಾರ್ಜ್ಶೀಟ್ ಸಲ್ಲಿಸುವಲ್ಲಿ ವಿಳಂಬ ಮಾಡಿದಕ್ಕೆ ಜಾಮೀನು !
ಚಾರ್ಜ್ಶೀಟ್ಗಳನ್ನು ಸಲ್ಲಿಸಲು ತಡ ಮಾಡಿದವರ ವಿರುದ್ಧ ರಾಜ್ಯದ ಬಿಜೆಪಿ ಸರಕಾರವು ಕ್ರಮ ಕೈಗೊಳ್ಳಬೇಕು !

ಬೆಂಗಳೂರು – ಕಳೆದ ವರ್ಷ ಆಗಸ್ಟ್ ನಲ್ಲಿ ನಗರದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪ್ರದೇಶದಲ್ಲಿ ಮತಾಂಧರು ನಡೆಸಿದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾದ ಗಲಭೆಕೋರರಿಗೆ ಕರ್ನಾಟಕ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ. ಚಾರ್ಜ್ಶೀಟ್ಅನ್ನು ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ ಗಲಭೆಕೋರರಿಗೆ ನ್ಯಾಯಾಲಯವು ಜಾಮೀನು ನೀಡಿತು. ಜೊತೆಗೆ ಚಾರ್ಜ್ಶೀಟ್ಗಳನ್ನು ಸಲ್ಲಿಸಲು ಹೆಚ್ಚಿನ ಸಮಯ ಬೇಕು ಎಂಬ ಬೇಡಿಕೆಯನ್ನು ನ್ಯಾಯಾಲಯವು ತಿರಸ್ಕರಿಸಿತು. ೧೧೧ ಆರೋಪಿಗಳಲ್ಲಿ ೯೦ ಮಂದಿಗೆ ಈ ಹಿಂದೆ ವಿಶೇಷ ನ್ಯಾಯಾಲಯವು ಜಾಮೀನು ನೀಡಿತ್ತು. ಉಳಿದ ೨೧ ಜನರಿಗೆ ಈಗ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ.
East Bengaluru riot case: 115 accused get bail https://t.co/KXC7A9gkn0
— TOI Bengaluru (@TOIBengaluru) June 17, 2021
ಮುಹಮ್ಮದ್ ಪೈಗಂಬರನನ್ನು ಸಾಮಾಜಿಕ ಮಾಧ್ಯಮದಿಂದ ಅವಮಾನಿಸಿದ ನೆಪದಲ್ಲಿ ೨೦೨೦ ರ ಆಗಸ್ಟ್ ೧೦ ರ ರಾತ್ರಿ ಇಲ್ಲಿನ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಲಾಗಿತ್ತು. ಅದೇರೀತಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೂ ದಾಳಿ ನಡೆಸಲಾಯಿತು. ಆ ಸಮಯದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದರೆ ಇತರ ಮೂವರು ಗಾಯಗೊಂಡಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !