ಮನೋರೋಗಿ ವ್ಯಕ್ತಿಯಿಂದ ನೀಡಲಾಗಿತ್ತು ದೂರು !
‘ಭೂತಗಳು ಇಲ್ಲ’, ಎಂದು ಭಾರತದ ಬುದ್ಧಿಪ್ರಾಮಾಣ್ಯವಾದಿಗಳು ಹೇಳುತ್ತಿರುತ್ತಾರೆ. ವಿದೇಶದಲ್ಲಿ ಈ ಬಗ್ಗೆ ಸಂಶೋಧನೆ ಮಾಡಿದ ಸಾವಿರಾರು ಜಾಲತಾಣಗಳಿವೆ, ಈ ರೀತಿಯ ಸಂಶೋಧನೆಯನ್ನು ಮಾಡಲು ಮಾತ್ರ ಬುದ್ಧಿಪ್ರಾಮಾಣ್ಯವಾದಿಗಳು ಪ್ರಯತ್ನಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಕರ್ಣಾವತಿ (ಗುಜರಾತ) – ರಾಜ್ಯದ ಪಂಚಮಹಾಲದಲ್ಲಿ ವರಸಂಗ ಬಾರಿಯಾ ಎಂಬ ವ್ಯಕ್ತಿಯು ೨ ಭೂತಗಳ ವಿರುದ್ಧ ಜಾಂಭೂಘೋದಾ ಪೊಲೀಸು ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದಾರೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಭೂತಗಳ ಗುಂಪೊಂದು ಅವರ ಬಳಿ ಬಂದಿತ್ತು ಮತ್ತು ಅವುಗಳಲ್ಲಿ ೨ ಭೂತಗಳು ನನ್ನನ್ನು ಕೊಲ್ಲುವುದಾಗಿ ಬೆದರಿಕೆಯನ್ನು ನೀಡಿದವು, ಎಂದು ಬಾರಿಯಾ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಬಾರಿಯಾ ಮನೋರೋಗಿ ಆಗಿದ್ದಾರೆಂಬುದು ಗಮನಕ್ಕೆ ಬಂದಿದೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. (ಮನೋರೋಗವಾಗುವುದರ ಹಿಂದೆ ಆಧ್ಯಾತ್ಮಿಕ ಕಾರಣಗಳಿರುವ ಸಾಧ್ಯತೆಗಳಿವೆ. ಆದ್ದರಿಂದ ಇಂತಹ ವ್ಯಕ್ತಿಗಳಿಗೆ ಮಾನಸೋಪಚಾರದೊಂದಿಗೆ ಆಧ್ಯಾತ್ಮಿಕ ಉಪಾಯವನ್ನೂ ಮಾಡಿದರೆ ಗುಣಮುಖರಾಗುವ ಸಾಧ್ಯತೆಯು ಹೆಚ್ಚಿರುತ್ತದೆ, ಇದನ್ನು ಬುದ್ಧಿ ಪ್ರಾಮಾಣ್ಯವಾದಿಗಳು ಅರಿತುಕೊಳ್ಳುವರೇ ? – ಸಂಪಾದಕರು)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು