ಗೌರಿ ಲಂಕೇಶ್ ಹತ್ಯೆ ಪ್ರಕರಣಸರ್ವೋಚ್ಚ ನ್ಯಾಯಾಲಯದಿಂದ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಆದೇಶ ! |

ನವ ದೆಹಲಿ – ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದ ೬ ನೇ ಆರೋಪಿ ಮೋಹನ್ ನಾಯಕ್ ಇವರ ಮೇಲಿನ ‘ಕೊಕಾ’ ಅಪರಾಧವನ್ನು ರದ್ದುಗೊಳಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಿಸಿತ್ತು. ಅದಕ್ಕೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಇವರು ಸವೋಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಸರ್ವೋಚ್ಚ ನ್ಯಾಯಾಲಯವು ನಾಯಕ ಅವರ ಜಾಮೀನಿನ ಮೇಲೆ ಅಪರಾಧವನ್ನು ರದ್ದು ಪಡಿಸಿದ ತೀರ್ಪಿನಿಂದ ಪ್ರಭಾವಕ್ಕೊಳಗಾಗದೇ ಇತ್ಯರ್ಥ ಪಡಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಆದೇಶ ನೀಡಿದೆ. ಅದೇ ರೀತಿ ಈ ಅರ್ಜಿಯ ಬಗ್ಗೆ ಉತ್ತರ ನೀಡುವಂತೆ ಕರ್ನಾಟಕ ಸರಕಾರಕ್ಕೆ ಆದೇಶ ನೀಡಿದೆ. ಮೋಹನ್ ನಾಯಕ್ ಇವರ ಮೇಲೆ ಹೊರಿಸಿದ್ದ ಎಲ್ಲಾ ಆರೋಪವನ್ನು ಎಪ್ರಿಲ್ ೨೨ ರಂದು ನಡೆದ ಆಲಿಕೆಯ ಸಮಯದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ವಜಾಗೊಳಿಸಿತ್ತು. ಆದ್ದರಿಂದ ನಾಯಕ ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಗೌರಿ ಲಂಕೇಶ್ ಹತ್ಯೆ ಕೇಸ್: ಯಾವುದೇ ಪ್ರಭಾವಕ್ಕೊಳಗಾಗದೆ ಜಾಮೀನಿನ ಕುರಿತು ನಿರ್ಧರಿಸಿ-ಸುಪ್ರೀಂ ಕೋರ್ಟ್ https://t.co/th7PMTbSEc via @KannadaPrabha #GauriLankeshmurder #bailplea #SupremeCourt
— kannadaprabha (@KannadaPrabha) July 3, 2021
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ