ಕರುಗಳ ವಿತರಣೆಯೊಂದಿಗೆ ಸ್ವಲ್ಪ ಕಾಲದ ತನಕ ಅವುಗಳ ಮೇವಿನ ಬಗ್ಗೆಯೂ ಅನುಕೂಲ ಮಾಡಿಕೊಡುವುದು ಅಗತ್ಯವಿದೆ. ಇಲ್ಲದಿದ್ದರೆ ದುರ್ಬಲ ವರ್ಗದವರು ಆಹಾರಕ್ಕಾಗಿ ಹೋರಾಡಬೇಕಾಗುತ್ತದೆ !
ಬೆಂಗಳೂರು – ಹುತಾತ್ಮ, ಸೈನಿಕರ ಪತ್ನಿ, ದೇವದಾಸಿ, ಶವಾಗಾರದಲ್ಲಿ ಕೆಲಸ ಮಾಡುತ್ತಿರುವವರು ಮತ್ತು ವಿಧವೆಯರು ಮುಂತಾದ ದುರ್ಬಲದವರಿಗೆ ಹಣಕಾಸಿನ ನೆರವು ಎಂದು ‘ಅಮೃತ ಸಿರಿ’ ಯೋಜನೆಯಡಿ ಉತ್ತಮ ತಳಿಗಳ ಕರುಗಳನ್ನು ಕಡಿಮೆ ದರದಲ್ಲಿ ನೀಡಲಾಗುವುದು, ಎಂಬ ಮಾಹಿತಿಯನ್ನು ಪಶುಸಂಗೋಪನಾ ಕಾರ್ಯದರ್ಶಿ ಪ್ರಭು ಚವ್ಹಾಣ ಇವರು ನೀಡಿದರು.
ಚವ್ಹಾಣ ಇವರು ತಮ್ಮ ಮಾತನ್ನು ಮುಂದುವರೆಸುತ್ತಾ, ಮಾರುಕಟ್ಟೆ ಬೆಲೆಯ ಶೇಕಡಾ ೨೫ ಕ್ಕೆ ಕರುಗಳನ್ನು ವಿತರಿಸಲಾಗುವುದು ದೇಶೀಯ ತಳಿಯ ಹಸುಗಳ ಸಂಖ್ಯೆಯನ್ನು ಹೆಚ್ಚಿಸಲು ಸಹ ಇದು ಸಹಾಯ ಮಾಡುತ್ತದೆ. ಸಂತಾನೋತ್ಪತ್ತಿ ಕೇಂದ್ರದಲ್ಲಿ ಅಗತ್ಯವಿರುವಷ್ಟು ಕರುಗಳನ್ನು ಇಟ್ಟುಕೊಂಡು ಉಳಿದ ಕರುಗಳನ್ನು ನೀಡಲಾಗುವುದು. ಈ ಉದ್ದೇಶಕ್ಕಾಗಿ ಹಳ್ಳಿಕಾರ, ಅಮೃತ ಮಹಲ, ಮಲೆನಾಡ ಗಿಡ್ಡ, ಖಿಲಾರಿ ಮತ್ತು ಕೃಷ್ಣಾವಳಿ ಜಾತಿಯ ಹಸುಗಳ ಕರುಗಳನ್ನು ಈ ಉದ್ದೇಶಕ್ಕಾಗಿ ಇಡಲಾಗುವುದು. ರಾಜ್ಯದಲ್ಲಿ ೧೯ ಸಂತಾನೋತ್ಪತ್ತಿ ಕೇಂದ್ರಗಳಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಲ್ಲಿ ೯೨೭ ಹಸುಗಳನ್ನು ನೀಡಲಾಗುವುದು. ತಾಲ್ಲೂಕು ಪ್ರಾಣಿ ವಿತರಣಾ ಸಮಿತಿ ಪರವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?