ಗುರುಪೂರ್ಣಿಮೆಯಂದು ೧೦೦೦ ಪಟ್ಟು ಹೆಚ್ಚು ಕಾರ್ಯನಿರತ ಗುರುತತ್ತ್ವದಿಂದ ಎಲ್ಲರಿಗೂ ಲಾಭವಾಗಬೇಕೆಂದು’ ಆನ್ಲೈನ್’ ಮೂಲಕ ಗುರುಪೂರ್ಣಿಮಾ ಮಹೋತ್ಸವ ಆಯೋಜಿಸುತ್ತಿದ್ದೇವೆ. ತಮಗೆಲ್ಲರಿಗೂ ಹಾರ್ದಿಕ ಆಮಂತ್ರಣ.
ಗುರುಪೂರ್ಣಿಮೆಯನ್ನು ಆಚರಿಸುವುದರಲ್ಲಿ, ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತ ಪಡಿಸುವ ಒಂದು ಉದ್ದೇಶವಿದೆ; ಅದರ ಜೊತೆಗೆ ಆ ದಿನ ಗುರುಗಳ ಕೃಪಾಶೀರ್ವಾದವು ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ನಿತ್ಯಕ್ಕಿಂತಲೂ ಹೆಚ್ಚು ಪಟ್ಟು ಇರುತ್ತದೆ. ಮಹೋತ್ಸವದ ಕಾರ್ಯದಲ್ಲಿ ಸಕ್ರಿಯವಾಗಿ ಸಹಭಾಗಿಗಳಾಗುವವರಿಗೆ ಅವರ ಪಾಲ್ಗೊಳ್ಳುವಿಕೆಯ ಪ್ರಮಾಣಕ್ಕೆ ತಕ್ಕಂತೆ ಲಾಭವಾಗುತ್ತದೆ. ಆ ದಿನ ಕೇವಲ ದರ್ಶನಕ್ಕೆಂದು ಬಂದಿರುವವರಿಗೆ ಸಹಜವಾಗಿಯೇ ಕಡಿಮೆ ಲಾಭವಾಗುತ್ತದೆ. ನಿಜವಾದ ಶಿಷ್ಯನಿಗೆ ಕ್ಷಣಕ್ಷಣಕ್ಕೂ ಗುರುಗಳ ನೆನಪಿರುತ್ತದೆ. ಇತರರಿಗೆ ಕನಿಷ್ಠ ಪಕ್ಷ ವರ್ಷಕ್ಕೊಮ್ಮೆಯಾದರೂ ಗುರುಗಳ ನೆನಪಾಗಲೆಂದು ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ !


ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !