ಅಪರಾಧಿಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲದ ಪೊಲೀಸರು ಜನರ ರಕ್ಷಣೆ ಹೇಗೆ ಮಾಡುವರು ?

ತಿರುವನಂತಪುರಮ್ (ಕೇರಳ) – ಇಲ್ಲಿಯ ಕುಟ್ಟಿಚಾಲದ ಬಳಿಯ ನೆಲ್ಲಿಕ್ಕುನ್ನುನಲ್ಲಿ ಗಾಂಜಾ ಮಾಫಿಯಾದಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ನಿಂದ ದಾಳಿ ಮಾಡಲಾಯಿತು. ಇದರಲ್ಲಿ ಟಿನೊ ಜೊಸೇಫ್ ಹೆಸರಿನ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಲೈ ೧೩ ರಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಗಾಂಜಾ ಮಾರಾಟವಾಗುತ್ತದೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅದಕ್ಕನುಸಾರ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದರು. ಆಗ ಮಾಫಿಯಾದವರು ಅವರ ಮೇಲೆ ದಾಳಿ ಮಾಡಿದರು. ಈ ಸಮಯದಲ್ಲಿ ಪರಿಸರದ ಕೆಲವು ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ನಂತರ ಇತರ ಸ್ಥಳದ ಪೊಲೀಸರನ್ನು ಕರೆಸಲಾಯಿತು; ಆದರೆ ಅಷ್ಟರೊಳಗೆ ಮಾಫಿಯಾಗಳು ಕಾಡಿನಲ್ಲಿ ಪರಾರಿಯಾಗಿದ್ದರು. ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ.
#Kerala: Drug mafia hurls petrol bomb, stones on cops conducting raids in Kuttichal, #Thiruvananthapuram https://t.co/FMli605v3I via @NewIndianXpress
— TNIE Kerala (@xpresskerala) July 16, 2021
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ