ನವದೆಹಲಿ – ಪರಿಶಿಷ್ಟ ಜಾತಿ ಮತ್ತು ಪಂಗಡದವರಲ್ಲಿ ಯಾರಾದರೂ ಮತಾಂತರವಾದರೆ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಇರುವ ಯೋಜನೆಯ ಲಾಭ ಸಿಗುವುದಿಲ್ಲ; ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ಒಂದು ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಹೇಳಿದೆ. ಕೇಂದ್ರ ಸರಕಾರವು, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಮತ್ತು ವಿಕಾಸ ಮಾಡುವುದು ಸರಕಾರಿ ಯೋಜನೆಯ ಉದ್ದೇಶವಾಗಿದೆ; ಅದರ ಲಾಭವನ್ನು ಮತಾಂತರಿತರಿಗೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಆಂಧ್ರಪ್ರದೇಶದಲ್ಲಿ ಮತಾಂತರಗೊಂಡಿರುವವರಿಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸಿಗುವ ಎಲ್ಲ ಸೌಲಭ್ಯಗಳು ಸಿಗಲಿವೆ !
ಆಂಧ್ರಪ್ರದೇಶದಲ್ಲಿ ಕ್ರೈಸ್ತ ಮುಖ್ಯಮಂತ್ರಿ ಜಗನಮೋಹನ್ ರೆಡ್ಡಿ ಇರುವುದರಿಂದ ಇಂತಹ ಆದೇಶವನ್ನು ಹೊರಡಿಸಿ ಕಾರ್ಯಾನ್ವಿತಗೊಳಿಸಲಾಗುತ್ತದೆ. ಜಾತ್ಯತೀತ ಭಾರತಕ್ಕೆ ಇದು ಲಜ್ಜಾಸ್ಪದವಾಗಿದೆ.
ಭಾಗ್ಯನಗರ – ಆಂಧ್ರಪ್ರದೇಶ ಸರಕಾರದಿಂದ ಜುಲೈ ೩೦ ರಂದು ಜಾರಿ ಮಾಡಿರುವ ಆದೇಶಕ್ಕನುಸಾರ ರಾಜ್ಯದಲ್ಲಿ ಹಿಂದುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕೊಡುವ ಸೌಲಭ್ಯಗಳನ್ನು ಕ್ರೈಸ್ತ ಮತ್ತು ಬೌದ್ಧ ಧರ್ಮವನ್ನು ಸ್ವೀಕಾರ ಮಾಡಿದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೂ ಕೊಡಲಾಗುವುದು.
Benefits of centrally sponsored schemes for SCs can’t be given to Converted Christians – Centre won’t be party to Andhra Pradesh schemes for Christians https://t.co/dDw1AQ1HLh
— OpIndia.com (@OpIndia_com) August 4, 2021
ಆಂಧ್ರಪ್ರದೇಶ ಸರಕಾರದ ಈ ಆದೇಶವು ಕೇಂದ್ರ ಸರಕಾರದ ಯೋಜನೆಗಳಿಗೆ ಅನ್ವಯಿಸುವುದಿಲ್ಲ. ಆಂಧ್ರಪ್ರದೇಶದಲ್ಲಿ ಕ್ರೈಸ್ತ ಧರ್ಮ ಸ್ವೀಕಾರ ಮಾಡುವವರಲ್ಲಿ ಶೇ. ೮೦ ರಷ್ಟು ಜನರು ಪರಿಶಿಷ್ಟ ಜಾತಿ ಮತ್ತು ಪಂಗಡದವರಾಗಿದ್ದಾರೆ. (ಇಂತಹವರಿಗೆ ಆಮಿಷವೊಡ್ಡಿ ಅವರನ್ನು ಮತಾಂತರಿಸಿರಬಹುದು, ಎಂಬುದು ಗಮನಕ್ಕೆ ಬರುತ್ತದೆ ! ಇಂತಹ ಘಟನೆಗಳನ್ನು ತಡೆಯಲು ಕೇಂದ್ರ ಸರಕಾರವು ತಕ್ಷಣವೇ ಮತಾಂತರ ವಿರೋಧಿ ಕಾಯ್ದೆಯನ್ನು ತರುವುದು ಅಗತ್ಯವಿದೆ – ಸಂಪಾದಕರು)

‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !