ಕಳೆದ ೩ ದಶಕಗಳಿಂದ ಭಾರತ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿದೆ, ಇದು ಇಲ್ಲಿವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ನವದೆಹಲಿ : ದೇಶದ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾರ್ಯಕ್ರಮದ ಸಿದ್ಧತೆ ನಡೆಯುತ್ತಿರುವಾಗ ಭದ್ರತೆಯ ದೃಷ್ಟಿಯಲ್ಲಿಯೂ ಎಚ್ಚರಿಕೆಯನ್ನು ನಿರ್ವಹಿಸಲಾಗುತ್ತಿದೆ. ದೆಹಲಿ ಪೊಲೀಸರು ಕೆಂಪು ಕೋಟೆಯ ಪರಿಸರದಲ್ಲಿ ಪರಾರಿಯಾಗಿರುವ ೬ ಭಯೋತ್ಪಾದಕರ ಛಾಯಾಚಿತ್ರ ಮತ್ತು ಮಾಹಿತಿಯಿರುವ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಭಯೋತ್ಪಾದಕರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಪೊಲೀಸರು ಈ ಆರೂ ಭಯೋತ್ಪಾದಕರು ಅಲ್-ಕೈದಾ ಭಯೋತ್ಪಾದಕ ಸಂಘಟನೆಗೆ ಸಂಬಂಧಪಟ್ಟವರಾಗಿದ್ದಾರೆ. ಗುಪ್ತಚರ ಇಲಾಖೆಗಳಿಂದ ಮಾಹಿತಿ ಪಡೆದ ನಂತರ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಈ ಭಯೋತ್ಪಾದಕರು ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ದೇಶದ ಯಾವುದೇ ಭಾಗದಲ್ಲಿ ಕಾರ್ಯಾಚರಣೆ ನಡೆಸಬಹುದು. ರೈತರ ಚಳುವಳಿಯ ನೆಪದಲ್ಲಿ ಕೆಲವರು ದೆಹಲಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಬಹುದು. ಇದಕ್ಕಾಗಿ ಅವರು ಡ್ರೋನ್ಗಳನ್ನು ಕೂಡ ಬಳಸಬಹುದು. ಆದ್ದರಿಂದ ಡ್ರೋನ್ ಹಾರಾಟವನ್ನು ಕೂಡ ನಿಷೇಧಿಸಲಾಗಿದೆ.

ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು