ಕಳೆದ ೩ ದಶಕಗಳಿಂದ ಭಾರತ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವವನ್ನು ಭಯೋತ್ಪಾದನೆಯ ಕರಿನೆರಳಿನಲ್ಲಿ ಆಚರಿಸುತ್ತಿದೆ, ಇದು ಇಲ್ಲಿವರೆಗಿನ ಎಲ್ಲಾ ಪಕ್ಷದ ಆಡಳಿತಗಾರರಿಗೆ ನಾಚಿಕೆಯ ಸಂಗತಿಯಾಗಿದೆ !
ನವದೆಹಲಿ : ದೇಶದ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾರ್ಯಕ್ರಮದ ಸಿದ್ಧತೆ ನಡೆಯುತ್ತಿರುವಾಗ ಭದ್ರತೆಯ ದೃಷ್ಟಿಯಲ್ಲಿಯೂ ಎಚ್ಚರಿಕೆಯನ್ನು ನಿರ್ವಹಿಸಲಾಗುತ್ತಿದೆ. ದೆಹಲಿ ಪೊಲೀಸರು ಕೆಂಪು ಕೋಟೆಯ ಪರಿಸರದಲ್ಲಿ ಪರಾರಿಯಾಗಿರುವ ೬ ಭಯೋತ್ಪಾದಕರ ಛಾಯಾಚಿತ್ರ ಮತ್ತು ಮಾಹಿತಿಯಿರುವ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಭಯೋತ್ಪಾದಕರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಪೊಲೀಸರು ಈ ಆರೂ ಭಯೋತ್ಪಾದಕರು ಅಲ್-ಕೈದಾ ಭಯೋತ್ಪಾದಕ ಸಂಘಟನೆಗೆ ಸಂಬಂಧಪಟ್ಟವರಾಗಿದ್ದಾರೆ. ಗುಪ್ತಚರ ಇಲಾಖೆಗಳಿಂದ ಮಾಹಿತಿ ಪಡೆದ ನಂತರ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಈ ಭಯೋತ್ಪಾದಕರು ಕೇವಲ ದೆಹಲಿಯಲ್ಲಿ ಮಾತ್ರವಲ್ಲ, ದೇಶದ ಯಾವುದೇ ಭಾಗದಲ್ಲಿ ಕಾರ್ಯಾಚರಣೆ ನಡೆಸಬಹುದು. ರೈತರ ಚಳುವಳಿಯ ನೆಪದಲ್ಲಿ ಕೆಲವರು ದೆಹಲಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಬಹುದು. ಇದಕ್ಕಾಗಿ ಅವರು ಡ್ರೋನ್ಗಳನ್ನು ಕೂಡ ಬಳಸಬಹುದು. ಆದ್ದರಿಂದ ಡ್ರೋನ್ ಹಾರಾಟವನ್ನು ಕೂಡ ನಿಷೇಧಿಸಲಾಗಿದೆ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !